ಓದುಗರ ಪತ್ರ

ಓದುಗರ ಪತ್ರ |ಕುಂಭಮೇಳದಲಿ ಕಾಲ್ತುಳಿತಕ್ಕೆ ಸಿಲುಕಿದವರ ರಕ್ಷಣೆಯಾಗಲಿ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಮತ್ತು ನೂಕು ನುಗ್ಗಲಿನಿಂದಾಗಿ ನಾಲ್ವರು ಕನ್ನಡಿಗರೂ ಸೇರಿದಂತೆ ೩೦ ಜನರು ಬಲಿಯಾಗಿರುವುದು ದುರದೃಷ್ಟಕರ.

ಒಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಇಷ್ಟು ಜನ ಸೇರುವುದು ಬಹುಶಃ ವಿಶ್ವದಲ್ಲಿಯೇ ಇದೇ ಮೊದಲು ಅನಿಸುತ್ತದೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಸೇರಿದಾಗ ನಾವೇ ಮೊದಲು ಮುಂದೆ ಹೋಗಬೇಕು ಎನ್ನುವ ಹುಚ್ಚುತನ ಎಲ್ಲೆ ಮೀರುತ್ತದೆ. ಆ ಸಂದರ್ಭದಲ್ಲಿ ಎಷ್ಟೇ ನಿಯಂತ್ರಣ ಮಾಡಲು ಪ್ರಯತ್ನಿಸಿದರೂ ಇಂತಹ ಘಟನೆಗಳು ನಡೆಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳು ನಡೆದಾಗ ನೇರವಾಗಿ ಸರ್ಕಾರವನ್ನು ದೂರಲು ಸಾಧ್ಯವಿಲ್ಲ. ಇಲ್ಲಿ ಸರ್ಕಾರದ ವೈಫಲ್ಯದ ಜತೆಗೆ ಜನರ ಅಸಹನೆ ಮತ್ತು ಅವೈಜ್ಞಾನಿಕ ನಡವಳಿಕೆಯೂ ಕಾರಣವಾಗುತ್ತದೆ ಎಂಬುದನ್ನು ಮರೆಯಬಾರದು. ದುರದೃಷ್ಟವಶಾತ್ ಇಂತಹ ಘಟನೆಗಳನ್ನೂ ಕೆಲವರು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳು ತ್ತಿದ್ದಾರೆ. ಇಂತಹ ಘಟನೆಗಳು ನಡೆದಾಗ ಸಂತ್ರಸ್ತರಿಗೆ ಸಾಂತ್ವನ ಹೇಳಬೇಕು, ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಬೇಕೇ ಹೊರತು ಸರ್ಕಾರವನ್ನು ದೂಷಿಸುವುದು ಸರಿಯಲ್ಲ. ಇನ್ನು ಕೆಲ ರಾಜಕಾರಣಿಗಳು ಕುಂಭಮೇಳದ ಬಗ್ಗೆ ವ್ಯಂಗ್ಯವಾಡುತ್ತಿದ್ದು, ಒಂದು ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗುವಂತೆ ಮಾತನಾಡುತ್ತಿದ್ದಾರೆ. ಬಹುಶಃ ಒಂದು ವರ್ಗದ ರಾಜಕಾರಣಿಗಳಿಗೆ ಕುಂಭಮೇಳದ ಸಂಭ್ರಮ ಹಿಡಿಸುತ್ತಿಲ್ಲ ಅನಿಸುತ್ತದೆ. ಕೋಟ್ಯಂತರ ಜನರು ಸೇರಿದರೂ ಈವರೆಗೂ ಕುಂಭಮೇಳ ವ್ಯವಸ್ಥಿತವಾಗಿ ನಡೆದಿರುವುದು ಹೆಮ್ಮೆಯ ವಿಚಾರ. ಇಂತಹ ಒಂದು ಧಾರ್ಮಿಕ ಆಚರಣೆ ಯನ್ನು ಟೀಕಿಸುವ ಬದಲು ಕಾಲ್ತುಳಿತದಲ್ಲಿ ಸಿಲುಕಿದವರಿಗೆ ಸರ್ಕಾರಗಳು ಪಕ್ಷಬೇಧ ಮರೆತು ರಕ್ಷಣೆ ನೀಡಲಿ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

1 hour ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

1 hour ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

1 hour ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

1 hour ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

1 hour ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

1 hour ago