ಓದುಗರ ಪತ್ರ

ಓದುಗರ ಪತ್ರ |ಕುಂಭಮೇಳದಲಿ ಕಾಲ್ತುಳಿತಕ್ಕೆ ಸಿಲುಕಿದವರ ರಕ್ಷಣೆಯಾಗಲಿ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಮತ್ತು ನೂಕು ನುಗ್ಗಲಿನಿಂದಾಗಿ ನಾಲ್ವರು ಕನ್ನಡಿಗರೂ ಸೇರಿದಂತೆ ೩೦ ಜನರು ಬಲಿಯಾಗಿರುವುದು ದುರದೃಷ್ಟಕರ.

ಒಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಇಷ್ಟು ಜನ ಸೇರುವುದು ಬಹುಶಃ ವಿಶ್ವದಲ್ಲಿಯೇ ಇದೇ ಮೊದಲು ಅನಿಸುತ್ತದೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಸೇರಿದಾಗ ನಾವೇ ಮೊದಲು ಮುಂದೆ ಹೋಗಬೇಕು ಎನ್ನುವ ಹುಚ್ಚುತನ ಎಲ್ಲೆ ಮೀರುತ್ತದೆ. ಆ ಸಂದರ್ಭದಲ್ಲಿ ಎಷ್ಟೇ ನಿಯಂತ್ರಣ ಮಾಡಲು ಪ್ರಯತ್ನಿಸಿದರೂ ಇಂತಹ ಘಟನೆಗಳು ನಡೆಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳು ನಡೆದಾಗ ನೇರವಾಗಿ ಸರ್ಕಾರವನ್ನು ದೂರಲು ಸಾಧ್ಯವಿಲ್ಲ. ಇಲ್ಲಿ ಸರ್ಕಾರದ ವೈಫಲ್ಯದ ಜತೆಗೆ ಜನರ ಅಸಹನೆ ಮತ್ತು ಅವೈಜ್ಞಾನಿಕ ನಡವಳಿಕೆಯೂ ಕಾರಣವಾಗುತ್ತದೆ ಎಂಬುದನ್ನು ಮರೆಯಬಾರದು. ದುರದೃಷ್ಟವಶಾತ್ ಇಂತಹ ಘಟನೆಗಳನ್ನೂ ಕೆಲವರು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳು ತ್ತಿದ್ದಾರೆ. ಇಂತಹ ಘಟನೆಗಳು ನಡೆದಾಗ ಸಂತ್ರಸ್ತರಿಗೆ ಸಾಂತ್ವನ ಹೇಳಬೇಕು, ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಬೇಕೇ ಹೊರತು ಸರ್ಕಾರವನ್ನು ದೂಷಿಸುವುದು ಸರಿಯಲ್ಲ. ಇನ್ನು ಕೆಲ ರಾಜಕಾರಣಿಗಳು ಕುಂಭಮೇಳದ ಬಗ್ಗೆ ವ್ಯಂಗ್ಯವಾಡುತ್ತಿದ್ದು, ಒಂದು ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗುವಂತೆ ಮಾತನಾಡುತ್ತಿದ್ದಾರೆ. ಬಹುಶಃ ಒಂದು ವರ್ಗದ ರಾಜಕಾರಣಿಗಳಿಗೆ ಕುಂಭಮೇಳದ ಸಂಭ್ರಮ ಹಿಡಿಸುತ್ತಿಲ್ಲ ಅನಿಸುತ್ತದೆ. ಕೋಟ್ಯಂತರ ಜನರು ಸೇರಿದರೂ ಈವರೆಗೂ ಕುಂಭಮೇಳ ವ್ಯವಸ್ಥಿತವಾಗಿ ನಡೆದಿರುವುದು ಹೆಮ್ಮೆಯ ವಿಚಾರ. ಇಂತಹ ಒಂದು ಧಾರ್ಮಿಕ ಆಚರಣೆ ಯನ್ನು ಟೀಕಿಸುವ ಬದಲು ಕಾಲ್ತುಳಿತದಲ್ಲಿ ಸಿಲುಕಿದವರಿಗೆ ಸರ್ಕಾರಗಳು ಪಕ್ಷಬೇಧ ಮರೆತು ರಕ್ಷಣೆ ನೀಡಲಿ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

51 mins ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

1 hour ago

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

4 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

4 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

4 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

4 hours ago