ಓದುಗರ ಪತ್ರ

ಓದುಗರ ಪತ್ರ |ಕುಂಭಮೇಳದಲಿ ಕಾಲ್ತುಳಿತಕ್ಕೆ ಸಿಲುಕಿದವರ ರಕ್ಷಣೆಯಾಗಲಿ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಮತ್ತು ನೂಕು ನುಗ್ಗಲಿನಿಂದಾಗಿ ನಾಲ್ವರು ಕನ್ನಡಿಗರೂ ಸೇರಿದಂತೆ ೩೦ ಜನರು ಬಲಿಯಾಗಿರುವುದು ದುರದೃಷ್ಟಕರ.

ಒಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಇಷ್ಟು ಜನ ಸೇರುವುದು ಬಹುಶಃ ವಿಶ್ವದಲ್ಲಿಯೇ ಇದೇ ಮೊದಲು ಅನಿಸುತ್ತದೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಸೇರಿದಾಗ ನಾವೇ ಮೊದಲು ಮುಂದೆ ಹೋಗಬೇಕು ಎನ್ನುವ ಹುಚ್ಚುತನ ಎಲ್ಲೆ ಮೀರುತ್ತದೆ. ಆ ಸಂದರ್ಭದಲ್ಲಿ ಎಷ್ಟೇ ನಿಯಂತ್ರಣ ಮಾಡಲು ಪ್ರಯತ್ನಿಸಿದರೂ ಇಂತಹ ಘಟನೆಗಳು ನಡೆಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳು ನಡೆದಾಗ ನೇರವಾಗಿ ಸರ್ಕಾರವನ್ನು ದೂರಲು ಸಾಧ್ಯವಿಲ್ಲ. ಇಲ್ಲಿ ಸರ್ಕಾರದ ವೈಫಲ್ಯದ ಜತೆಗೆ ಜನರ ಅಸಹನೆ ಮತ್ತು ಅವೈಜ್ಞಾನಿಕ ನಡವಳಿಕೆಯೂ ಕಾರಣವಾಗುತ್ತದೆ ಎಂಬುದನ್ನು ಮರೆಯಬಾರದು. ದುರದೃಷ್ಟವಶಾತ್ ಇಂತಹ ಘಟನೆಗಳನ್ನೂ ಕೆಲವರು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳು ತ್ತಿದ್ದಾರೆ. ಇಂತಹ ಘಟನೆಗಳು ನಡೆದಾಗ ಸಂತ್ರಸ್ತರಿಗೆ ಸಾಂತ್ವನ ಹೇಳಬೇಕು, ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಬೇಕೇ ಹೊರತು ಸರ್ಕಾರವನ್ನು ದೂಷಿಸುವುದು ಸರಿಯಲ್ಲ. ಇನ್ನು ಕೆಲ ರಾಜಕಾರಣಿಗಳು ಕುಂಭಮೇಳದ ಬಗ್ಗೆ ವ್ಯಂಗ್ಯವಾಡುತ್ತಿದ್ದು, ಒಂದು ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗುವಂತೆ ಮಾತನಾಡುತ್ತಿದ್ದಾರೆ. ಬಹುಶಃ ಒಂದು ವರ್ಗದ ರಾಜಕಾರಣಿಗಳಿಗೆ ಕುಂಭಮೇಳದ ಸಂಭ್ರಮ ಹಿಡಿಸುತ್ತಿಲ್ಲ ಅನಿಸುತ್ತದೆ. ಕೋಟ್ಯಂತರ ಜನರು ಸೇರಿದರೂ ಈವರೆಗೂ ಕುಂಭಮೇಳ ವ್ಯವಸ್ಥಿತವಾಗಿ ನಡೆದಿರುವುದು ಹೆಮ್ಮೆಯ ವಿಚಾರ. ಇಂತಹ ಒಂದು ಧಾರ್ಮಿಕ ಆಚರಣೆ ಯನ್ನು ಟೀಕಿಸುವ ಬದಲು ಕಾಲ್ತುಳಿತದಲ್ಲಿ ಸಿಲುಕಿದವರಿಗೆ ಸರ್ಕಾರಗಳು ಪಕ್ಷಬೇಧ ಮರೆತು ರಕ್ಷಣೆ ನೀಡಲಿ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

2 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

2 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

2 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

2 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

5 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

5 hours ago