ಓದುಗರ ಪತ್ರ

ಓದುಗರ ಪತ್ರ |ಕುಂಭಮೇಳದಲಿ ಕಾಲ್ತುಳಿತಕ್ಕೆ ಸಿಲುಕಿದವರ ರಕ್ಷಣೆಯಾಗಲಿ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಮತ್ತು ನೂಕು ನುಗ್ಗಲಿನಿಂದಾಗಿ ನಾಲ್ವರು ಕನ್ನಡಿಗರೂ ಸೇರಿದಂತೆ ೩೦ ಜನರು ಬಲಿಯಾಗಿರುವುದು ದುರದೃಷ್ಟಕರ.

ಒಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಇಷ್ಟು ಜನ ಸೇರುವುದು ಬಹುಶಃ ವಿಶ್ವದಲ್ಲಿಯೇ ಇದೇ ಮೊದಲು ಅನಿಸುತ್ತದೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಸೇರಿದಾಗ ನಾವೇ ಮೊದಲು ಮುಂದೆ ಹೋಗಬೇಕು ಎನ್ನುವ ಹುಚ್ಚುತನ ಎಲ್ಲೆ ಮೀರುತ್ತದೆ. ಆ ಸಂದರ್ಭದಲ್ಲಿ ಎಷ್ಟೇ ನಿಯಂತ್ರಣ ಮಾಡಲು ಪ್ರಯತ್ನಿಸಿದರೂ ಇಂತಹ ಘಟನೆಗಳು ನಡೆಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳು ನಡೆದಾಗ ನೇರವಾಗಿ ಸರ್ಕಾರವನ್ನು ದೂರಲು ಸಾಧ್ಯವಿಲ್ಲ. ಇಲ್ಲಿ ಸರ್ಕಾರದ ವೈಫಲ್ಯದ ಜತೆಗೆ ಜನರ ಅಸಹನೆ ಮತ್ತು ಅವೈಜ್ಞಾನಿಕ ನಡವಳಿಕೆಯೂ ಕಾರಣವಾಗುತ್ತದೆ ಎಂಬುದನ್ನು ಮರೆಯಬಾರದು. ದುರದೃಷ್ಟವಶಾತ್ ಇಂತಹ ಘಟನೆಗಳನ್ನೂ ಕೆಲವರು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳು ತ್ತಿದ್ದಾರೆ. ಇಂತಹ ಘಟನೆಗಳು ನಡೆದಾಗ ಸಂತ್ರಸ್ತರಿಗೆ ಸಾಂತ್ವನ ಹೇಳಬೇಕು, ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಬೇಕೇ ಹೊರತು ಸರ್ಕಾರವನ್ನು ದೂಷಿಸುವುದು ಸರಿಯಲ್ಲ. ಇನ್ನು ಕೆಲ ರಾಜಕಾರಣಿಗಳು ಕುಂಭಮೇಳದ ಬಗ್ಗೆ ವ್ಯಂಗ್ಯವಾಡುತ್ತಿದ್ದು, ಒಂದು ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗುವಂತೆ ಮಾತನಾಡುತ್ತಿದ್ದಾರೆ. ಬಹುಶಃ ಒಂದು ವರ್ಗದ ರಾಜಕಾರಣಿಗಳಿಗೆ ಕುಂಭಮೇಳದ ಸಂಭ್ರಮ ಹಿಡಿಸುತ್ತಿಲ್ಲ ಅನಿಸುತ್ತದೆ. ಕೋಟ್ಯಂತರ ಜನರು ಸೇರಿದರೂ ಈವರೆಗೂ ಕುಂಭಮೇಳ ವ್ಯವಸ್ಥಿತವಾಗಿ ನಡೆದಿರುವುದು ಹೆಮ್ಮೆಯ ವಿಚಾರ. ಇಂತಹ ಒಂದು ಧಾರ್ಮಿಕ ಆಚರಣೆ ಯನ್ನು ಟೀಕಿಸುವ ಬದಲು ಕಾಲ್ತುಳಿತದಲ್ಲಿ ಸಿಲುಕಿದವರಿಗೆ ಸರ್ಕಾರಗಳು ಪಕ್ಷಬೇಧ ಮರೆತು ರಕ್ಷಣೆ ನೀಡಲಿ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

10 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

10 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

10 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

10 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

10 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

10 hours ago