ಓದುಗರ ಪತ್ರ

ಓದುಗರ ಪತ್ರ |ಕುಂಭಮೇಳದಲಿ ಕಾಲ್ತುಳಿತಕ್ಕೆ ಸಿಲುಕಿದವರ ರಕ್ಷಣೆಯಾಗಲಿ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಮತ್ತು ನೂಕು ನುಗ್ಗಲಿನಿಂದಾಗಿ ನಾಲ್ವರು ಕನ್ನಡಿಗರೂ ಸೇರಿದಂತೆ ೩೦ ಜನರು ಬಲಿಯಾಗಿರುವುದು ದುರದೃಷ್ಟಕರ.

ಒಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಇಷ್ಟು ಜನ ಸೇರುವುದು ಬಹುಶಃ ವಿಶ್ವದಲ್ಲಿಯೇ ಇದೇ ಮೊದಲು ಅನಿಸುತ್ತದೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಸೇರಿದಾಗ ನಾವೇ ಮೊದಲು ಮುಂದೆ ಹೋಗಬೇಕು ಎನ್ನುವ ಹುಚ್ಚುತನ ಎಲ್ಲೆ ಮೀರುತ್ತದೆ. ಆ ಸಂದರ್ಭದಲ್ಲಿ ಎಷ್ಟೇ ನಿಯಂತ್ರಣ ಮಾಡಲು ಪ್ರಯತ್ನಿಸಿದರೂ ಇಂತಹ ಘಟನೆಗಳು ನಡೆಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳು ನಡೆದಾಗ ನೇರವಾಗಿ ಸರ್ಕಾರವನ್ನು ದೂರಲು ಸಾಧ್ಯವಿಲ್ಲ. ಇಲ್ಲಿ ಸರ್ಕಾರದ ವೈಫಲ್ಯದ ಜತೆಗೆ ಜನರ ಅಸಹನೆ ಮತ್ತು ಅವೈಜ್ಞಾನಿಕ ನಡವಳಿಕೆಯೂ ಕಾರಣವಾಗುತ್ತದೆ ಎಂಬುದನ್ನು ಮರೆಯಬಾರದು. ದುರದೃಷ್ಟವಶಾತ್ ಇಂತಹ ಘಟನೆಗಳನ್ನೂ ಕೆಲವರು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳು ತ್ತಿದ್ದಾರೆ. ಇಂತಹ ಘಟನೆಗಳು ನಡೆದಾಗ ಸಂತ್ರಸ್ತರಿಗೆ ಸಾಂತ್ವನ ಹೇಳಬೇಕು, ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಬೇಕೇ ಹೊರತು ಸರ್ಕಾರವನ್ನು ದೂಷಿಸುವುದು ಸರಿಯಲ್ಲ. ಇನ್ನು ಕೆಲ ರಾಜಕಾರಣಿಗಳು ಕುಂಭಮೇಳದ ಬಗ್ಗೆ ವ್ಯಂಗ್ಯವಾಡುತ್ತಿದ್ದು, ಒಂದು ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗುವಂತೆ ಮಾತನಾಡುತ್ತಿದ್ದಾರೆ. ಬಹುಶಃ ಒಂದು ವರ್ಗದ ರಾಜಕಾರಣಿಗಳಿಗೆ ಕುಂಭಮೇಳದ ಸಂಭ್ರಮ ಹಿಡಿಸುತ್ತಿಲ್ಲ ಅನಿಸುತ್ತದೆ. ಕೋಟ್ಯಂತರ ಜನರು ಸೇರಿದರೂ ಈವರೆಗೂ ಕುಂಭಮೇಳ ವ್ಯವಸ್ಥಿತವಾಗಿ ನಡೆದಿರುವುದು ಹೆಮ್ಮೆಯ ವಿಚಾರ. ಇಂತಹ ಒಂದು ಧಾರ್ಮಿಕ ಆಚರಣೆ ಯನ್ನು ಟೀಕಿಸುವ ಬದಲು ಕಾಲ್ತುಳಿತದಲ್ಲಿ ಸಿಲುಕಿದವರಿಗೆ ಸರ್ಕಾರಗಳು ಪಕ್ಷಬೇಧ ಮರೆತು ರಕ್ಷಣೆ ನೀಡಲಿ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

9 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

9 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

9 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

9 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

9 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

9 hours ago