ಓದುಗರ ಪತ್ರ
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಮತ್ತು ನೂಕು ನುಗ್ಗಲಿನಿಂದಾಗಿ ನಾಲ್ವರು ಕನ್ನಡಿಗರೂ ಸೇರಿದಂತೆ ೩೦ ಜನರು ಬಲಿಯಾಗಿರುವುದು ದುರದೃಷ್ಟಕರ.
ಒಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಇಷ್ಟು ಜನ ಸೇರುವುದು ಬಹುಶಃ ವಿಶ್ವದಲ್ಲಿಯೇ ಇದೇ ಮೊದಲು ಅನಿಸುತ್ತದೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಸೇರಿದಾಗ ನಾವೇ ಮೊದಲು ಮುಂದೆ ಹೋಗಬೇಕು ಎನ್ನುವ ಹುಚ್ಚುತನ ಎಲ್ಲೆ ಮೀರುತ್ತದೆ. ಆ ಸಂದರ್ಭದಲ್ಲಿ ಎಷ್ಟೇ ನಿಯಂತ್ರಣ ಮಾಡಲು ಪ್ರಯತ್ನಿಸಿದರೂ ಇಂತಹ ಘಟನೆಗಳು ನಡೆಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳು ನಡೆದಾಗ ನೇರವಾಗಿ ಸರ್ಕಾರವನ್ನು ದೂರಲು ಸಾಧ್ಯವಿಲ್ಲ. ಇಲ್ಲಿ ಸರ್ಕಾರದ ವೈಫಲ್ಯದ ಜತೆಗೆ ಜನರ ಅಸಹನೆ ಮತ್ತು ಅವೈಜ್ಞಾನಿಕ ನಡವಳಿಕೆಯೂ ಕಾರಣವಾಗುತ್ತದೆ ಎಂಬುದನ್ನು ಮರೆಯಬಾರದು. ದುರದೃಷ್ಟವಶಾತ್ ಇಂತಹ ಘಟನೆಗಳನ್ನೂ ಕೆಲವರು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳು ತ್ತಿದ್ದಾರೆ. ಇಂತಹ ಘಟನೆಗಳು ನಡೆದಾಗ ಸಂತ್ರಸ್ತರಿಗೆ ಸಾಂತ್ವನ ಹೇಳಬೇಕು, ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಬೇಕೇ ಹೊರತು ಸರ್ಕಾರವನ್ನು ದೂಷಿಸುವುದು ಸರಿಯಲ್ಲ. ಇನ್ನು ಕೆಲ ರಾಜಕಾರಣಿಗಳು ಕುಂಭಮೇಳದ ಬಗ್ಗೆ ವ್ಯಂಗ್ಯವಾಡುತ್ತಿದ್ದು, ಒಂದು ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗುವಂತೆ ಮಾತನಾಡುತ್ತಿದ್ದಾರೆ. ಬಹುಶಃ ಒಂದು ವರ್ಗದ ರಾಜಕಾರಣಿಗಳಿಗೆ ಕುಂಭಮೇಳದ ಸಂಭ್ರಮ ಹಿಡಿಸುತ್ತಿಲ್ಲ ಅನಿಸುತ್ತದೆ. ಕೋಟ್ಯಂತರ ಜನರು ಸೇರಿದರೂ ಈವರೆಗೂ ಕುಂಭಮೇಳ ವ್ಯವಸ್ಥಿತವಾಗಿ ನಡೆದಿರುವುದು ಹೆಮ್ಮೆಯ ವಿಚಾರ. ಇಂತಹ ಒಂದು ಧಾರ್ಮಿಕ ಆಚರಣೆ ಯನ್ನು ಟೀಕಿಸುವ ಬದಲು ಕಾಲ್ತುಳಿತದಲ್ಲಿ ಸಿಲುಕಿದವರಿಗೆ ಸರ್ಕಾರಗಳು ಪಕ್ಷಬೇಧ ಮರೆತು ರಕ್ಷಣೆ ನೀಡಲಿ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…