ಓದುಗರ ಪತ್ರ

ಓದುಗರ ಪತ್ರ |ಪಟಾಕಿ ಬಿಟ್ಟು ದೀಪ ಹಚ್ಚೋಣ

ಇತ್ತೀಚಿನ ವರ್ಷಗಳಲ್ಲಿ ದೀಪಾವಳಿ ಎಂದರೆ ಬೆಳಕಿನ ಹಬ್ಬ ಎನ್ನುವು ದಕ್ಕಿಂತ ಪಟಾಕಿಗಳ ಹಬ್ಬ ಎಂಬಂತಾಗಿದೆ. ಪಟಾಕಿಗಳಿಲ್ಲದ ದೀಪಾವಳಿ ಯನ್ನು ಊಹಿಸಿಕೊಳ್ಳುವುದೂ ಅಸಾಧ್ಯ. ದೀಪಾವಳಿ ಬೆಳಕಿನ ಹಬ್ಬವಾಗಿದ್ದು, ನಮ್ಮನ್ನು ಕತ್ತಲಿನಿಂದ ಬೆಳಕಿನೆಡೆಗೆ ಮುನ್ನಡೆಸಬೇಕು.

ಈ ಹಬ್ಬದಲ್ಲಿ ನಾವು ದೀಪ ಹಚ್ಚಿ ಸಂಭ್ರಮಿಸಬೇಕೇ ವಿನಾ ಪಟಾಕಿ ಸಿಡಿಸುವ ಮೂಲಕ ಪರಿಸರ ಮಾಲಿನ್ಯ ಮಾಡಬಾರದು. ಪಟಾಕಿ ಸಿಡಿಸುವುದರಿಂದ ಹೊಗೆಯ ಜತೆಗೆ ಅದರಲ್ಲಿನ ರಾಸಾಯನಿಕಗಳೂ ಗಾಳಿಗೆ ಸೇರುತ್ತವೆ. ಇದರಿಂದ ವಾಯು ಮಾಲಿನ್ಯವಾಗುವ ಜತೆಗೆ ಪಟಾಕಿಯಿಂದ ಉಂಟಾಗುವ ಶಬ್ದದಿಂದಾಗಿ ಶಬ್ದ ಮಾಲಿನ್ಯವೂ ಉಂಟಾಗುತ್ತದೆ. ಈ ರಾಸಾಯನಿಕಗಳು ನಮ್ಮ ದೇಹಕ್ಕೆ ಸೇರುವುದರಿಂದ ನಮ್ಮ ಆರೋಗ್ಯದ ಮೇಲೆಯೂ ಗಂಭೀರ ಪರಿಣಾಮ ಬೀರುತ್ತದೆ.

ಕರ್ಕಶ ಶಬ್ದದಿಂದಾಗಿ ಶಿಶುಗಳು ಹಾಗೂ ಹಿರಿಯ ನಾಗರಿಕರಿಗೆ ಶ್ರವಣ ದೋಷ ಉಂಟಾಗಬಹುದು. ಇವುಗಳೊಂದಿಗೆ ಕೆಲ ಬಾರಿ ಅಗ್ನಿ ಅನಾಹುತಗಳು ಸಂಭವಿಸುವ ಅಪಾಯವೂ ಇರುತ್ತದೆ. ಆದ್ದರಿಂದ ಈ ಬಾರಿಯ ಪಟಾಕಿಗಳಿಂದ ದೂರವಿದ್ದು, ದೀಪವನ್ನು ಹಚ್ಚಿ ಸಂಭ್ರಮದಿಂದ ದೀಪಾವಳಿ ಆಚರಿಸೋಣ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

4 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

5 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

5 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

5 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

5 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

5 hours ago