ಓದುಗರ ಪತ್ರ
ಇತ್ತೀಚಿನ ವರ್ಷಗಳಲ್ಲಿ ದೀಪಾವಳಿ ಎಂದರೆ ಬೆಳಕಿನ ಹಬ್ಬ ಎನ್ನುವು ದಕ್ಕಿಂತ ಪಟಾಕಿಗಳ ಹಬ್ಬ ಎಂಬಂತಾಗಿದೆ. ಪಟಾಕಿಗಳಿಲ್ಲದ ದೀಪಾವಳಿ ಯನ್ನು ಊಹಿಸಿಕೊಳ್ಳುವುದೂ ಅಸಾಧ್ಯ. ದೀಪಾವಳಿ ಬೆಳಕಿನ ಹಬ್ಬವಾಗಿದ್ದು, ನಮ್ಮನ್ನು ಕತ್ತಲಿನಿಂದ ಬೆಳಕಿನೆಡೆಗೆ ಮುನ್ನಡೆಸಬೇಕು.
ಈ ಹಬ್ಬದಲ್ಲಿ ನಾವು ದೀಪ ಹಚ್ಚಿ ಸಂಭ್ರಮಿಸಬೇಕೇ ವಿನಾ ಪಟಾಕಿ ಸಿಡಿಸುವ ಮೂಲಕ ಪರಿಸರ ಮಾಲಿನ್ಯ ಮಾಡಬಾರದು. ಪಟಾಕಿ ಸಿಡಿಸುವುದರಿಂದ ಹೊಗೆಯ ಜತೆಗೆ ಅದರಲ್ಲಿನ ರಾಸಾಯನಿಕಗಳೂ ಗಾಳಿಗೆ ಸೇರುತ್ತವೆ. ಇದರಿಂದ ವಾಯು ಮಾಲಿನ್ಯವಾಗುವ ಜತೆಗೆ ಪಟಾಕಿಯಿಂದ ಉಂಟಾಗುವ ಶಬ್ದದಿಂದಾಗಿ ಶಬ್ದ ಮಾಲಿನ್ಯವೂ ಉಂಟಾಗುತ್ತದೆ. ಈ ರಾಸಾಯನಿಕಗಳು ನಮ್ಮ ದೇಹಕ್ಕೆ ಸೇರುವುದರಿಂದ ನಮ್ಮ ಆರೋಗ್ಯದ ಮೇಲೆಯೂ ಗಂಭೀರ ಪರಿಣಾಮ ಬೀರುತ್ತದೆ.
ಕರ್ಕಶ ಶಬ್ದದಿಂದಾಗಿ ಶಿಶುಗಳು ಹಾಗೂ ಹಿರಿಯ ನಾಗರಿಕರಿಗೆ ಶ್ರವಣ ದೋಷ ಉಂಟಾಗಬಹುದು. ಇವುಗಳೊಂದಿಗೆ ಕೆಲ ಬಾರಿ ಅಗ್ನಿ ಅನಾಹುತಗಳು ಸಂಭವಿಸುವ ಅಪಾಯವೂ ಇರುತ್ತದೆ. ಆದ್ದರಿಂದ ಈ ಬಾರಿಯ ಪಟಾಕಿಗಳಿಂದ ದೂರವಿದ್ದು, ದೀಪವನ್ನು ಹಚ್ಚಿ ಸಂಭ್ರಮದಿಂದ ದೀಪಾವಳಿ ಆಚರಿಸೋಣ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…