ಓದುಗರ ಪತ್ರ
ಇತ್ತೀಚಿನ ವರ್ಷಗಳಲ್ಲಿ ದೀಪಾವಳಿ ಎಂದರೆ ಬೆಳಕಿನ ಹಬ್ಬ ಎನ್ನುವು ದಕ್ಕಿಂತ ಪಟಾಕಿಗಳ ಹಬ್ಬ ಎಂಬಂತಾಗಿದೆ. ಪಟಾಕಿಗಳಿಲ್ಲದ ದೀಪಾವಳಿ ಯನ್ನು ಊಹಿಸಿಕೊಳ್ಳುವುದೂ ಅಸಾಧ್ಯ. ದೀಪಾವಳಿ ಬೆಳಕಿನ ಹಬ್ಬವಾಗಿದ್ದು, ನಮ್ಮನ್ನು ಕತ್ತಲಿನಿಂದ ಬೆಳಕಿನೆಡೆಗೆ ಮುನ್ನಡೆಸಬೇಕು.
ಈ ಹಬ್ಬದಲ್ಲಿ ನಾವು ದೀಪ ಹಚ್ಚಿ ಸಂಭ್ರಮಿಸಬೇಕೇ ವಿನಾ ಪಟಾಕಿ ಸಿಡಿಸುವ ಮೂಲಕ ಪರಿಸರ ಮಾಲಿನ್ಯ ಮಾಡಬಾರದು. ಪಟಾಕಿ ಸಿಡಿಸುವುದರಿಂದ ಹೊಗೆಯ ಜತೆಗೆ ಅದರಲ್ಲಿನ ರಾಸಾಯನಿಕಗಳೂ ಗಾಳಿಗೆ ಸೇರುತ್ತವೆ. ಇದರಿಂದ ವಾಯು ಮಾಲಿನ್ಯವಾಗುವ ಜತೆಗೆ ಪಟಾಕಿಯಿಂದ ಉಂಟಾಗುವ ಶಬ್ದದಿಂದಾಗಿ ಶಬ್ದ ಮಾಲಿನ್ಯವೂ ಉಂಟಾಗುತ್ತದೆ. ಈ ರಾಸಾಯನಿಕಗಳು ನಮ್ಮ ದೇಹಕ್ಕೆ ಸೇರುವುದರಿಂದ ನಮ್ಮ ಆರೋಗ್ಯದ ಮೇಲೆಯೂ ಗಂಭೀರ ಪರಿಣಾಮ ಬೀರುತ್ತದೆ.
ಕರ್ಕಶ ಶಬ್ದದಿಂದಾಗಿ ಶಿಶುಗಳು ಹಾಗೂ ಹಿರಿಯ ನಾಗರಿಕರಿಗೆ ಶ್ರವಣ ದೋಷ ಉಂಟಾಗಬಹುದು. ಇವುಗಳೊಂದಿಗೆ ಕೆಲ ಬಾರಿ ಅಗ್ನಿ ಅನಾಹುತಗಳು ಸಂಭವಿಸುವ ಅಪಾಯವೂ ಇರುತ್ತದೆ. ಆದ್ದರಿಂದ ಈ ಬಾರಿಯ ಪಟಾಕಿಗಳಿಂದ ದೂರವಿದ್ದು, ದೀಪವನ್ನು ಹಚ್ಚಿ ಸಂಭ್ರಮದಿಂದ ದೀಪಾವಳಿ ಆಚರಿಸೋಣ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…