ಓದುಗರ ಪತ್ರ

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ. ಅವಧಿ ಮುಗಿದ ಮೇಲೆ ಮೆಚ್ಯುರಿಟಿ ಹಣವನ್ನು ಹಿಂದಕ್ಕೆ ಪಡೆಯಲು, ಆರ್‌ಡಿ ಮಾಡಿದ ವ್ಯಕ್ತಿಯೇ ತಾನು ಆರ್‌ಡಿ ಮಾಡಿರುವ ಅಂಚೆ ಕಚೇರಿಗೇ ಖುದ್ದು ಭೇಟಿ ನೀಡಿ ಸಹಿ ಮಾಡಿ ಹಣ ವಾಪಸ್ ಪಡೆಯಬೇಕೆಂಬ ಕಟ್ಟುನಿಟ್ಟಿನ ಸೂಚನೆ ಇದೆ.

ತುಂಬು ಗರ್ಭಿಣಿಯರು, ಬಾಣಂತಿಯರು, ಹಿರಿಯ ನಾಗರಿಕರು, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಅಂಚೆ ಕಚೇರಿಗೆ ಹೋಗಲು ಸಾಧ್ಯವೇ ಇಲ್ಲ. ಅಂತಹವರು ಕೂಡ ಖುದ್ದಾಗಿ ಅಂಚೆ ಕಚೇರಿಗೆ ಬಂದು ಹಣ ಪಡೆಯ ಬೇಕೆಂದರೆ ಹೇಗೆ? ಇಂತಹ ಆದೇಶ ಮಾಡಿರುವ ಅಂಚೆ ಕಚೇರಿಯ ಹಿರಿಯ ಅಧಿಕಾರಿಗಳಿಗೆ ಕನಿಷ್ಠ ಪಕ್ಷ ತಿಳಿವಳಿಕೆಯಾದರೂ ಬೇಡವೇ ? ಅಂಚೆ ಕಚೇರಿಗಳಲ್ಲಿ ಸಾರ್ವಜನಿಕರು ಹಣ ಹೂಡಿಕೆ ಮಾಡುವಾಗ ಇರುವ ಆಸಕ್ತಿ, ಹಣ ವಾಪಸ್ ಕೊಡುವಾಗ ಸಿಬ್ಬಂದಿಗೆ ಇರುವುದಿಲ್ಲ.

ಅಂಚೆ ಕಚೇರಿಗಳು ಈಗ ಪೋಸ್ಟ್ ಆಫೀಸ್ ಸೇವಿಂಗ್ಸ್ ಬ್ಯಾಂಕ್ ಎಂದು ಮರುನಾಮಕರಣಗೊಂಡಿದ್ದು, ಬ್ಯಾಂಕ್‌ಗಳ ಮಾದರಿಯಲ್ಲಿಯೇ ವಿವಿಧ ಯೋಜನೆಗಳಲ್ಲಿ ಹಣ ತೊಡಗಿಸಿದವರು ಅನಿವಾರ್ಯ ಸಂದರ್ಭದಲ್ಲಿ ತಮ್ಮ ಪರವಾಗಿ ಸೂಚಿಸಿದ ವ್ಯಕ್ತಿಗೆ ಹಣ ವನ್ನು ಮರುಪಾವತಿ ಮಾಡುವ ನಿಯಮವನ್ನು ಜಾರಿಗೆ ತರಬೇಕಾಗಿದೆ. ಅಂಚೆ ಕಚೇರಿಗಳು ಜನ ಸ್ನೇಹಿ ಆಗಬೇಕೇ ಹೊರತು ಜನರಿಗೆ ತೊಂದರೆ ಕೊಡಬಾರದು, ಇದರಿಂದಾಗಿಯೇ ಜನಸಾಮಾನ್ಯರು ಅಂಚೆ ಕಚೇರಿಯ ಉಳಿತಾಯ ಯೋಜನೆಗಳಿಂದ ದೂರ ಉಳಿಯುತ್ತಿದ್ದಾರೆ. ಕೇಂದ್ರ ಹಣ ಕಾಸು ಸಚಿವರು ಪೋಸ್ಟಲ್ ಸೇವಿಂಗ್ಸ್ ಬ್ಯಾಂಕ್‌ಅನ್ನು ಜನ ಸ್ನೇಹಿಯಾಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಅನಾರೋಗ್ಯ ಪೀಡಿತ ಮಹಿಳೆ ಕುಟುಂಬಕ್ಕೆ ಎಚ್.ಡಿ. ಕುಮಾರಸ್ವಾಮಿ ನೆರವು

ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…

1 hour ago

ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ ; ಮೂವರು ಕಾರ್ಮಿಕರು ಸಾವು.

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…

3 hours ago

ಇಂದಿನಿಂದ ಟೋಲ್‌ಗಳಲ್ಲಿ ಕ್ಯಾಷ್‌ ಇಲ್ಲ ; ಡಿಜಿಟಲ್‌ ಪಾವತಿ ಮಾತ್ರ.

ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…

4 hours ago

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

6 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

7 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

7 hours ago