ಓದುಗರ ಪತ್ರ

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ. ಅವಧಿ ಮುಗಿದ ಮೇಲೆ ಮೆಚ್ಯುರಿಟಿ ಹಣವನ್ನು ಹಿಂದಕ್ಕೆ ಪಡೆಯಲು, ಆರ್‌ಡಿ ಮಾಡಿದ ವ್ಯಕ್ತಿಯೇ ತಾನು ಆರ್‌ಡಿ ಮಾಡಿರುವ ಅಂಚೆ ಕಚೇರಿಗೇ ಖುದ್ದು ಭೇಟಿ ನೀಡಿ ಸಹಿ ಮಾಡಿ ಹಣ ವಾಪಸ್ ಪಡೆಯಬೇಕೆಂಬ ಕಟ್ಟುನಿಟ್ಟಿನ ಸೂಚನೆ ಇದೆ.

ತುಂಬು ಗರ್ಭಿಣಿಯರು, ಬಾಣಂತಿಯರು, ಹಿರಿಯ ನಾಗರಿಕರು, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಅಂಚೆ ಕಚೇರಿಗೆ ಹೋಗಲು ಸಾಧ್ಯವೇ ಇಲ್ಲ. ಅಂತಹವರು ಕೂಡ ಖುದ್ದಾಗಿ ಅಂಚೆ ಕಚೇರಿಗೆ ಬಂದು ಹಣ ಪಡೆಯ ಬೇಕೆಂದರೆ ಹೇಗೆ? ಇಂತಹ ಆದೇಶ ಮಾಡಿರುವ ಅಂಚೆ ಕಚೇರಿಯ ಹಿರಿಯ ಅಧಿಕಾರಿಗಳಿಗೆ ಕನಿಷ್ಠ ಪಕ್ಷ ತಿಳಿವಳಿಕೆಯಾದರೂ ಬೇಡವೇ ? ಅಂಚೆ ಕಚೇರಿಗಳಲ್ಲಿ ಸಾರ್ವಜನಿಕರು ಹಣ ಹೂಡಿಕೆ ಮಾಡುವಾಗ ಇರುವ ಆಸಕ್ತಿ, ಹಣ ವಾಪಸ್ ಕೊಡುವಾಗ ಸಿಬ್ಬಂದಿಗೆ ಇರುವುದಿಲ್ಲ.

ಅಂಚೆ ಕಚೇರಿಗಳು ಈಗ ಪೋಸ್ಟ್ ಆಫೀಸ್ ಸೇವಿಂಗ್ಸ್ ಬ್ಯಾಂಕ್ ಎಂದು ಮರುನಾಮಕರಣಗೊಂಡಿದ್ದು, ಬ್ಯಾಂಕ್‌ಗಳ ಮಾದರಿಯಲ್ಲಿಯೇ ವಿವಿಧ ಯೋಜನೆಗಳಲ್ಲಿ ಹಣ ತೊಡಗಿಸಿದವರು ಅನಿವಾರ್ಯ ಸಂದರ್ಭದಲ್ಲಿ ತಮ್ಮ ಪರವಾಗಿ ಸೂಚಿಸಿದ ವ್ಯಕ್ತಿಗೆ ಹಣ ವನ್ನು ಮರುಪಾವತಿ ಮಾಡುವ ನಿಯಮವನ್ನು ಜಾರಿಗೆ ತರಬೇಕಾಗಿದೆ. ಅಂಚೆ ಕಚೇರಿಗಳು ಜನ ಸ್ನೇಹಿ ಆಗಬೇಕೇ ಹೊರತು ಜನರಿಗೆ ತೊಂದರೆ ಕೊಡಬಾರದು, ಇದರಿಂದಾಗಿಯೇ ಜನಸಾಮಾನ್ಯರು ಅಂಚೆ ಕಚೇರಿಯ ಉಳಿತಾಯ ಯೋಜನೆಗಳಿಂದ ದೂರ ಉಳಿಯುತ್ತಿದ್ದಾರೆ. ಕೇಂದ್ರ ಹಣ ಕಾಸು ಸಚಿವರು ಪೋಸ್ಟಲ್ ಸೇವಿಂಗ್ಸ್ ಬ್ಯಾಂಕ್‌ಅನ್ನು ಜನ ಸ್ನೇಹಿಯಾಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

2 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

5 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

5 hours ago

ಕೊಡಗು ಜಿಲ್ಲೆಯಲ್ಲಿ ನಮೂನೆ ವಿತರಣೆ ಕಾರ್ಯ ಪೂರ್ಣ

ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…

5 hours ago

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ

ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…

5 hours ago