ಓದುಗರ ಪತ್ರ

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ. ಅವಧಿ ಮುಗಿದ ಮೇಲೆ ಮೆಚ್ಯುರಿಟಿ ಹಣವನ್ನು ಹಿಂದಕ್ಕೆ ಪಡೆಯಲು, ಆರ್‌ಡಿ ಮಾಡಿದ ವ್ಯಕ್ತಿಯೇ ತಾನು ಆರ್‌ಡಿ ಮಾಡಿರುವ ಅಂಚೆ ಕಚೇರಿಗೇ ಖುದ್ದು ಭೇಟಿ ನೀಡಿ ಸಹಿ ಮಾಡಿ ಹಣ ವಾಪಸ್ ಪಡೆಯಬೇಕೆಂಬ ಕಟ್ಟುನಿಟ್ಟಿನ ಸೂಚನೆ ಇದೆ.

ತುಂಬು ಗರ್ಭಿಣಿಯರು, ಬಾಣಂತಿಯರು, ಹಿರಿಯ ನಾಗರಿಕರು, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಅಂಚೆ ಕಚೇರಿಗೆ ಹೋಗಲು ಸಾಧ್ಯವೇ ಇಲ್ಲ. ಅಂತಹವರು ಕೂಡ ಖುದ್ದಾಗಿ ಅಂಚೆ ಕಚೇರಿಗೆ ಬಂದು ಹಣ ಪಡೆಯ ಬೇಕೆಂದರೆ ಹೇಗೆ? ಇಂತಹ ಆದೇಶ ಮಾಡಿರುವ ಅಂಚೆ ಕಚೇರಿಯ ಹಿರಿಯ ಅಧಿಕಾರಿಗಳಿಗೆ ಕನಿಷ್ಠ ಪಕ್ಷ ತಿಳಿವಳಿಕೆಯಾದರೂ ಬೇಡವೇ ? ಅಂಚೆ ಕಚೇರಿಗಳಲ್ಲಿ ಸಾರ್ವಜನಿಕರು ಹಣ ಹೂಡಿಕೆ ಮಾಡುವಾಗ ಇರುವ ಆಸಕ್ತಿ, ಹಣ ವಾಪಸ್ ಕೊಡುವಾಗ ಸಿಬ್ಬಂದಿಗೆ ಇರುವುದಿಲ್ಲ.

ಅಂಚೆ ಕಚೇರಿಗಳು ಈಗ ಪೋಸ್ಟ್ ಆಫೀಸ್ ಸೇವಿಂಗ್ಸ್ ಬ್ಯಾಂಕ್ ಎಂದು ಮರುನಾಮಕರಣಗೊಂಡಿದ್ದು, ಬ್ಯಾಂಕ್‌ಗಳ ಮಾದರಿಯಲ್ಲಿಯೇ ವಿವಿಧ ಯೋಜನೆಗಳಲ್ಲಿ ಹಣ ತೊಡಗಿಸಿದವರು ಅನಿವಾರ್ಯ ಸಂದರ್ಭದಲ್ಲಿ ತಮ್ಮ ಪರವಾಗಿ ಸೂಚಿಸಿದ ವ್ಯಕ್ತಿಗೆ ಹಣ ವನ್ನು ಮರುಪಾವತಿ ಮಾಡುವ ನಿಯಮವನ್ನು ಜಾರಿಗೆ ತರಬೇಕಾಗಿದೆ. ಅಂಚೆ ಕಚೇರಿಗಳು ಜನ ಸ್ನೇಹಿ ಆಗಬೇಕೇ ಹೊರತು ಜನರಿಗೆ ತೊಂದರೆ ಕೊಡಬಾರದು, ಇದರಿಂದಾಗಿಯೇ ಜನಸಾಮಾನ್ಯರು ಅಂಚೆ ಕಚೇರಿಯ ಉಳಿತಾಯ ಯೋಜನೆಗಳಿಂದ ದೂರ ಉಳಿಯುತ್ತಿದ್ದಾರೆ. ಕೇಂದ್ರ ಹಣ ಕಾಸು ಸಚಿವರು ಪೋಸ್ಟಲ್ ಸೇವಿಂಗ್ಸ್ ಬ್ಯಾಂಕ್‌ಅನ್ನು ಜನ ಸ್ನೇಹಿಯಾಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ನಿರ್ಮಾಣ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…

21 mins ago

ಗೃಹಜ್ಯೋತಿ | ಮನೆ-ಮನೆ ಸಮೀಕ್ಷೆ ಅವಧಿ ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ

ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಿದೆ. 2023ರ…

1 hour ago

ಮೈಸೂರು ದಸರಾ | ಸೆ.28 ರಿಂದ ಅ.5ರವರೆಗೆ ಯುವ ಸಂಭ್ರಮ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…

2 hours ago

ಕಾವೇರಿ ಜಲವಿವಾದ: ಸೆ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…

8 hours ago

ಎಚ್.ಡಿ.ಕೋಟೆ: ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹುಲಿ ಸೆರೆ

ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.…

8 hours ago