Mysore
17
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಓದುಗರ ಪತ್ರ | ಸಮೀರ್ ಪರ ಧ್ವನಿಗೂಡಿಸೋಣ

೨೦೧೨ರಲ್ಲಿ ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣ ವನ್ನು ಮತ್ತೆ ಮುನ್ನೆಲೆಗೆ ತಂದಿರುವ ಯುಟ್ಯೂಬರ್ ಸಮೀರ್ ಅವರ ಧೈರ್ಯವನ್ನು ಮೆಚ್ಚಲೇಬೇಕು. ಆದರೆ ಆತನ ವಿರುದ್ಧ ಈಗ ಎಫ್‌ಐಆರ್ ದಾಖಲಿಸಿರುವುದು ನಿಜಕ್ಕೂ ಖಂಡನೀಯ.

ಕೆಲವರು ಸೌಜನ್ಯಳ ಹೆಸರು ಬಳಸಿಕೊಂಡು ರಾಜ ಕೀಯ ಮಾಡುವುದು, ಧರ್ಮ- ಧರ್ಮಗಳ ನಡುವೆ ಸಂಘರ್ಷ ತಂದಿಡುವ ಪ್ರಯತ್ನ ಮಾಡುತ್ತಿರುವುದು ಬೇಸರದ ಸಂಗತಿ.

೧೩-೧೪ ವರ್ಷಗಳು ಕಳೆದರೂ ನ್ಯಾಯ ಸಿಗದ ಸೌಜನ್ಯ ಹತ್ಯೆ ಪ್ರಕರಣದಲ್ಲಿ ಆಕೆಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಯು ಟ್ಯೂಬರ್ ಸಮೀರ್ ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದಾರೆ. ಆ ವಿಡಿಯೋ ಮೂಲಕ ಸೌಜ್ಯನ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಇಂತಹ ವ್ಯಕ್ತಿಯ ಮೇಲೆ ಎಫ್‌ಐಆರ್ ದಾಖಲಿಸಿರುವುದು ಸರಿಯಲ್ಲ. ಇದನ್ನು ಕನ್ನಡಿಗರು ಒಟ್ಟಾಗಿ ಖಂಡಿಸ ಬೇಕು. ಹಲವು ವರ್ಷಗಳಿಂದಲೂ ಈ ಪ್ರಕರಣದ ಕುರಿತು ನಿರಂತರವಾಗಿ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರಿಗೆ ಬೆಂಬಲವಾಗಿ ನಿಂತು ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರೆಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರಗಳು ಏಕೆ ಪ್ರಯತ್ನಿಸಲಿಲ್ಲ? ನ್ಯಾಯ ಕ್ಕಾಗಿ ಹೋರಾಡುವವರ ವಿರುದ್ಧವೇ ಪ್ರಕರಣ ದಾಖಲಾದರೆ, ಸಾಮಾನ್ಯ ಜನರಿಗೆ ನ್ಯಾಯ ದೊರಕುವುದಾದರೂ ಹೇಗೆ? ಆದ್ದರಿಂದ ಕನ್ನಡಿಗರೆಲ್ಲರೂ ಸಮೀರ್ ಪರ ಧ್ವನಿಗೂಡಿಸಬೇಕಿದೆ. -ಮನೋಜ್ ಸಾಮ್ರಾಟ್, ಮಾನಸಗಂಗೋತ್ರಿ, ಮೈಸೂರು.

Tags:
error: Content is protected !!