೨೦೧೨ರಲ್ಲಿ ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣ ವನ್ನು ಮತ್ತೆ ಮುನ್ನೆಲೆಗೆ ತಂದಿರುವ ಯುಟ್ಯೂಬರ್ ಸಮೀರ್ ಅವರ ಧೈರ್ಯವನ್ನು ಮೆಚ್ಚಲೇಬೇಕು. ಆದರೆ ಆತನ ವಿರುದ್ಧ ಈಗ ಎಫ್ಐಆರ್ ದಾಖಲಿಸಿರುವುದು ನಿಜಕ್ಕೂ ಖಂಡನೀಯ.
ಕೆಲವರು ಸೌಜನ್ಯಳ ಹೆಸರು ಬಳಸಿಕೊಂಡು ರಾಜ ಕೀಯ ಮಾಡುವುದು, ಧರ್ಮ- ಧರ್ಮಗಳ ನಡುವೆ ಸಂಘರ್ಷ ತಂದಿಡುವ ಪ್ರಯತ್ನ ಮಾಡುತ್ತಿರುವುದು ಬೇಸರದ ಸಂಗತಿ.
೧೩-೧೪ ವರ್ಷಗಳು ಕಳೆದರೂ ನ್ಯಾಯ ಸಿಗದ ಸೌಜನ್ಯ ಹತ್ಯೆ ಪ್ರಕರಣದಲ್ಲಿ ಆಕೆಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಯು ಟ್ಯೂಬರ್ ಸಮೀರ್ ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದಾರೆ. ಆ ವಿಡಿಯೋ ಮೂಲಕ ಸೌಜ್ಯನ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಇಂತಹ ವ್ಯಕ್ತಿಯ ಮೇಲೆ ಎಫ್ಐಆರ್ ದಾಖಲಿಸಿರುವುದು ಸರಿಯಲ್ಲ. ಇದನ್ನು ಕನ್ನಡಿಗರು ಒಟ್ಟಾಗಿ ಖಂಡಿಸ ಬೇಕು. ಹಲವು ವರ್ಷಗಳಿಂದಲೂ ಈ ಪ್ರಕರಣದ ಕುರಿತು ನಿರಂತರವಾಗಿ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರಿಗೆ ಬೆಂಬಲವಾಗಿ ನಿಂತು ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರೆಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರಗಳು ಏಕೆ ಪ್ರಯತ್ನಿಸಲಿಲ್ಲ? ನ್ಯಾಯ ಕ್ಕಾಗಿ ಹೋರಾಡುವವರ ವಿರುದ್ಧವೇ ಪ್ರಕರಣ ದಾಖಲಾದರೆ, ಸಾಮಾನ್ಯ ಜನರಿಗೆ ನ್ಯಾಯ ದೊರಕುವುದಾದರೂ ಹೇಗೆ? ಆದ್ದರಿಂದ ಕನ್ನಡಿಗರೆಲ್ಲರೂ ಸಮೀರ್ ಪರ ಧ್ವನಿಗೂಡಿಸಬೇಕಿದೆ. -ಮನೋಜ್ ಸಾಮ್ರಾಟ್, ಮಾನಸಗಂಗೋತ್ರಿ, ಮೈಸೂರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…