ಓದುಗರ ಪತ್ರ

ಓದುಗರ ಪತ್ರ | ಸಮೀರ್ ಪರ ಧ್ವನಿಗೂಡಿಸೋಣ

೨೦೧೨ರಲ್ಲಿ ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣ ವನ್ನು ಮತ್ತೆ ಮುನ್ನೆಲೆಗೆ ತಂದಿರುವ ಯುಟ್ಯೂಬರ್ ಸಮೀರ್ ಅವರ ಧೈರ್ಯವನ್ನು ಮೆಚ್ಚಲೇಬೇಕು. ಆದರೆ ಆತನ ವಿರುದ್ಧ ಈಗ ಎಫ್‌ಐಆರ್ ದಾಖಲಿಸಿರುವುದು ನಿಜಕ್ಕೂ ಖಂಡನೀಯ.

ಕೆಲವರು ಸೌಜನ್ಯಳ ಹೆಸರು ಬಳಸಿಕೊಂಡು ರಾಜ ಕೀಯ ಮಾಡುವುದು, ಧರ್ಮ- ಧರ್ಮಗಳ ನಡುವೆ ಸಂಘರ್ಷ ತಂದಿಡುವ ಪ್ರಯತ್ನ ಮಾಡುತ್ತಿರುವುದು ಬೇಸರದ ಸಂಗತಿ.

೧೩-೧೪ ವರ್ಷಗಳು ಕಳೆದರೂ ನ್ಯಾಯ ಸಿಗದ ಸೌಜನ್ಯ ಹತ್ಯೆ ಪ್ರಕರಣದಲ್ಲಿ ಆಕೆಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಯು ಟ್ಯೂಬರ್ ಸಮೀರ್ ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದಾರೆ. ಆ ವಿಡಿಯೋ ಮೂಲಕ ಸೌಜ್ಯನ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಇಂತಹ ವ್ಯಕ್ತಿಯ ಮೇಲೆ ಎಫ್‌ಐಆರ್ ದಾಖಲಿಸಿರುವುದು ಸರಿಯಲ್ಲ. ಇದನ್ನು ಕನ್ನಡಿಗರು ಒಟ್ಟಾಗಿ ಖಂಡಿಸ ಬೇಕು. ಹಲವು ವರ್ಷಗಳಿಂದಲೂ ಈ ಪ್ರಕರಣದ ಕುರಿತು ನಿರಂತರವಾಗಿ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರಿಗೆ ಬೆಂಬಲವಾಗಿ ನಿಂತು ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರೆಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರಗಳು ಏಕೆ ಪ್ರಯತ್ನಿಸಲಿಲ್ಲ? ನ್ಯಾಯ ಕ್ಕಾಗಿ ಹೋರಾಡುವವರ ವಿರುದ್ಧವೇ ಪ್ರಕರಣ ದಾಖಲಾದರೆ, ಸಾಮಾನ್ಯ ಜನರಿಗೆ ನ್ಯಾಯ ದೊರಕುವುದಾದರೂ ಹೇಗೆ? ಆದ್ದರಿಂದ ಕನ್ನಡಿಗರೆಲ್ಲರೂ ಸಮೀರ್ ಪರ ಧ್ವನಿಗೂಡಿಸಬೇಕಿದೆ. -ಮನೋಜ್ ಸಾಮ್ರಾಟ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

33 mins ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

47 mins ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

52 mins ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

2 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

11 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

11 hours ago