ಓದುಗರ ಪತ್ರ

ಓದುಗರ ಪತ್ರ: ನರಸಿಂಹ ಐಯ್ಯಂಗಾರ್‌ರನ್ನು ಸ್ಮರಿಸೋಣ

ಮೈಸೂರಿನ ಹಿರಿಯ ವಕೀಲರಾದ ಆರ್.ಜಿ.ನರಸಿಂಹ ಐಯ್ಯಂಗಾರ್ (74) ಮೊನ್ನೆ ನಿಧನರಾದರು.

ಮೈಸೂರಿನ ಎರಡನೇ ಮೇಯರ್ ಆಗಿ (1985-86) ಮೈಸೂರು ನಗರದ ಅಭಿವೃದ್ಧಿಗಾಗಿ ಶ್ರಮಿಸಿದ ಇವರ ಸೇವೆಯನ್ನು ಮೈಸೂರಿಗರು ಮರೆಯುವಂತಿಲ್ಲ. ಇವರ ಅಧಿಕಾರಾವಧಿಯಲ್ಲಿ ಕಲಾಮಂದಿರದಲ್ಲಿ ಮೊದಲ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ನಡೆದದ್ದು ಹೆಮ್ಮೆಯ ವಿಚಾರ. ಕಾರ್ಮಿಕ ಕಾನೂನು ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದ ನರಸಿಂಹ ಐಯ್ಯಂಗಾರ್‌ರವರು ಹಲವಾರು ಸಂಘ-ಸಂಸ್ಥೆಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಇದರ ಜತೆಗೆ ನಗರದ ಕಾಸ್ಮಾಪೋಲಿಟನ್ ಕ್ಲಬ್ ನ ಅಧ್ಯಕ್ಷರಾಗಿಯೂ ಎರಡು ಅವಧಿಗೆ ಚುನಾಯಿತರಾಗಿ ಸೇವೆ ಸಲ್ಲಿಸಿದ್ದಾರೆ.

ಜನತಾ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿದ ನರಸಿಂಹ ಐಯ್ಯಂಗಾರ್, ನಂತರದ ದಿನಗಳಲ್ಲಿ ಜನತಾ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡರು. ತಮ್ಮ ಜೀವಿತದ ಕೊನೆಯವರೆಗೂ ಕ್ರಿಯಾಶೀಲರಾಗಿಯೇ ಇದ್ದ ನರಸಿಂಹ ಐಯ್ಯಂಗಾರ್ ಮೈಸೂರಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅವರನ್ನು ಎಂದೆಂದಿಗೂ ನಾವೆಲ್ಲರು ಸ್ಮರಿಸಬೇಕಿದೆ.
-ಕೆ.ವಿ.ವಾಸು, ವಕೀಲರು, ವಿವೇಕಾನಂದನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

4 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

8 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

9 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

10 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

10 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

11 hours ago