ಓದುಗರ ಪತ್ರ
ಮೈಸೂರಿನ ಹಿರಿಯ ವಕೀಲರಾದ ಆರ್.ಜಿ.ನರಸಿಂಹ ಐಯ್ಯಂಗಾರ್ (74) ಮೊನ್ನೆ ನಿಧನರಾದರು.
ಮೈಸೂರಿನ ಎರಡನೇ ಮೇಯರ್ ಆಗಿ (1985-86) ಮೈಸೂರು ನಗರದ ಅಭಿವೃದ್ಧಿಗಾಗಿ ಶ್ರಮಿಸಿದ ಇವರ ಸೇವೆಯನ್ನು ಮೈಸೂರಿಗರು ಮರೆಯುವಂತಿಲ್ಲ. ಇವರ ಅಧಿಕಾರಾವಧಿಯಲ್ಲಿ ಕಲಾಮಂದಿರದಲ್ಲಿ ಮೊದಲ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ನಡೆದದ್ದು ಹೆಮ್ಮೆಯ ವಿಚಾರ. ಕಾರ್ಮಿಕ ಕಾನೂನು ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದ ನರಸಿಂಹ ಐಯ್ಯಂಗಾರ್ರವರು ಹಲವಾರು ಸಂಘ-ಸಂಸ್ಥೆಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಇದರ ಜತೆಗೆ ನಗರದ ಕಾಸ್ಮಾಪೋಲಿಟನ್ ಕ್ಲಬ್ ನ ಅಧ್ಯಕ್ಷರಾಗಿಯೂ ಎರಡು ಅವಧಿಗೆ ಚುನಾಯಿತರಾಗಿ ಸೇವೆ ಸಲ್ಲಿಸಿದ್ದಾರೆ.
ಜನತಾ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿದ ನರಸಿಂಹ ಐಯ್ಯಂಗಾರ್, ನಂತರದ ದಿನಗಳಲ್ಲಿ ಜನತಾ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡರು. ತಮ್ಮ ಜೀವಿತದ ಕೊನೆಯವರೆಗೂ ಕ್ರಿಯಾಶೀಲರಾಗಿಯೇ ಇದ್ದ ನರಸಿಂಹ ಐಯ್ಯಂಗಾರ್ ಮೈಸೂರಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅವರನ್ನು ಎಂದೆಂದಿಗೂ ನಾವೆಲ್ಲರು ಸ್ಮರಿಸಬೇಕಿದೆ.
-ಕೆ.ವಿ.ವಾಸು, ವಕೀಲರು, ವಿವೇಕಾನಂದನಗರ, ಮೈಸೂರು.
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…