ಓದುಗರ ಪತ್ರ

ಓದುಗರ ಪತ್ರ: ನರಸಿಂಹ ಐಯ್ಯಂಗಾರ್‌ರನ್ನು ಸ್ಮರಿಸೋಣ

ಮೈಸೂರಿನ ಹಿರಿಯ ವಕೀಲರಾದ ಆರ್.ಜಿ.ನರಸಿಂಹ ಐಯ್ಯಂಗಾರ್ (74) ಮೊನ್ನೆ ನಿಧನರಾದರು.

ಮೈಸೂರಿನ ಎರಡನೇ ಮೇಯರ್ ಆಗಿ (1985-86) ಮೈಸೂರು ನಗರದ ಅಭಿವೃದ್ಧಿಗಾಗಿ ಶ್ರಮಿಸಿದ ಇವರ ಸೇವೆಯನ್ನು ಮೈಸೂರಿಗರು ಮರೆಯುವಂತಿಲ್ಲ. ಇವರ ಅಧಿಕಾರಾವಧಿಯಲ್ಲಿ ಕಲಾಮಂದಿರದಲ್ಲಿ ಮೊದಲ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ನಡೆದದ್ದು ಹೆಮ್ಮೆಯ ವಿಚಾರ. ಕಾರ್ಮಿಕ ಕಾನೂನು ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದ ನರಸಿಂಹ ಐಯ್ಯಂಗಾರ್‌ರವರು ಹಲವಾರು ಸಂಘ-ಸಂಸ್ಥೆಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಇದರ ಜತೆಗೆ ನಗರದ ಕಾಸ್ಮಾಪೋಲಿಟನ್ ಕ್ಲಬ್ ನ ಅಧ್ಯಕ್ಷರಾಗಿಯೂ ಎರಡು ಅವಧಿಗೆ ಚುನಾಯಿತರಾಗಿ ಸೇವೆ ಸಲ್ಲಿಸಿದ್ದಾರೆ.

ಜನತಾ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿದ ನರಸಿಂಹ ಐಯ್ಯಂಗಾರ್, ನಂತರದ ದಿನಗಳಲ್ಲಿ ಜನತಾ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡರು. ತಮ್ಮ ಜೀವಿತದ ಕೊನೆಯವರೆಗೂ ಕ್ರಿಯಾಶೀಲರಾಗಿಯೇ ಇದ್ದ ನರಸಿಂಹ ಐಯ್ಯಂಗಾರ್ ಮೈಸೂರಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅವರನ್ನು ಎಂದೆಂದಿಗೂ ನಾವೆಲ್ಲರು ಸ್ಮರಿಸಬೇಕಿದೆ.
-ಕೆ.ವಿ.ವಾಸು, ವಕೀಲರು, ವಿವೇಕಾನಂದನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago