ಓದುಗರ ಪತ್ರ
ಮೈಸೂರಿನ ಹಿರಿಯ ವಕೀಲರಾದ ಆರ್.ಜಿ.ನರಸಿಂಹ ಐಯ್ಯಂಗಾರ್ (74) ಮೊನ್ನೆ ನಿಧನರಾದರು.
ಮೈಸೂರಿನ ಎರಡನೇ ಮೇಯರ್ ಆಗಿ (1985-86) ಮೈಸೂರು ನಗರದ ಅಭಿವೃದ್ಧಿಗಾಗಿ ಶ್ರಮಿಸಿದ ಇವರ ಸೇವೆಯನ್ನು ಮೈಸೂರಿಗರು ಮರೆಯುವಂತಿಲ್ಲ. ಇವರ ಅಧಿಕಾರಾವಧಿಯಲ್ಲಿ ಕಲಾಮಂದಿರದಲ್ಲಿ ಮೊದಲ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ನಡೆದದ್ದು ಹೆಮ್ಮೆಯ ವಿಚಾರ. ಕಾರ್ಮಿಕ ಕಾನೂನು ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದ ನರಸಿಂಹ ಐಯ್ಯಂಗಾರ್ರವರು ಹಲವಾರು ಸಂಘ-ಸಂಸ್ಥೆಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಇದರ ಜತೆಗೆ ನಗರದ ಕಾಸ್ಮಾಪೋಲಿಟನ್ ಕ್ಲಬ್ ನ ಅಧ್ಯಕ್ಷರಾಗಿಯೂ ಎರಡು ಅವಧಿಗೆ ಚುನಾಯಿತರಾಗಿ ಸೇವೆ ಸಲ್ಲಿಸಿದ್ದಾರೆ.
ಜನತಾ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿದ ನರಸಿಂಹ ಐಯ್ಯಂಗಾರ್, ನಂತರದ ದಿನಗಳಲ್ಲಿ ಜನತಾ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡರು. ತಮ್ಮ ಜೀವಿತದ ಕೊನೆಯವರೆಗೂ ಕ್ರಿಯಾಶೀಲರಾಗಿಯೇ ಇದ್ದ ನರಸಿಂಹ ಐಯ್ಯಂಗಾರ್ ಮೈಸೂರಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅವರನ್ನು ಎಂದೆಂದಿಗೂ ನಾವೆಲ್ಲರು ಸ್ಮರಿಸಬೇಕಿದೆ.
-ಕೆ.ವಿ.ವಾಸು, ವಕೀಲರು, ವಿವೇಕಾನಂದನಗರ, ಮೈಸೂರು.
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…