ಓದುಗರ ಪತ್ರ

ಓದುಗರ ಪತ್ರ: ಈ ಸಾವು ನ್ಯಾಯವೇ?

ಹೆತ್ತವರ ಕನಸುಗಳು ಅನಂತ, ಮಕ್ಕಳ ಸಾಧನೆಯನ್ನು ಕಣ್ತುಂಬಿಕೊಳ್ಳಲು ಆಸೆ ಪಡುತ್ತಾರೆ. ಕೊನೆಗೆ ಏನೂ ಮಾಡದಿದ್ದರೂ ಪರವಾಗಿಲ್ಲ ಮಕ್ಕಳು ನಮ್ಮ ಕಣ್ಣ ಮುಂದಿದ್ದರೆ ಸಾಕಪ್ಪಾ ಎಂದುಕೊಳ್ಳುತ್ತಾರೆ. ಆದರೆ ಇಂದಿನ ಯುವ ಪೀಳಿಗೆ ಕ್ರೀಡಾಭಿಮಾನದ ಹೆಸರಿನಲ್ಲಿ ಅತಿರೇಕದ ವರ್ತನೆ ತೋರಿ ದುರಂತವನ್ನು ಮೈಮೇಲೆ ಎಳೆದುಕೊಳ್ಳುತ್ತಿರುವುದು ವಿಪರ್ಯಾಸ.

ಏನಾಗಿದೆ ನಮ್ಮ ಸಮಾಜಕ್ಕೆ, ಯುವ ಜನತೆಗೆ? ಯಾಕೀ ಉನ್ಮಾದ? ಭಾವೋತ್ಕರ್ಷ? ರಾಜಕಾರಾಣಿಗಳ, ಸಿನಿಮಾ ನಟರ, ಕ್ರಿಕೆಟ್ ಆಟಗಾರರ ಹಿಂಬಾಲಕರಾಗಿ ಸಮಯ ವ್ಯರ್ಥ ಮಾಡಿಕೊಂಡು ನಿಮ್ಮ ವ್ಯಕ್ತಿತ್ವವನ್ನು, ಸಮಯವನ್ನು ವ್ಯರ್ಥ ಮಾಡಿಕೊಂಡು ಅವರ ಬದುಕನ್ನು ಉದ್ಧಾರ ಮಾಡುತ್ತಿದ್ದೀರಲ್ಲಾ ಏನನ್ನಬೇಕು ನಿಮಗೆ? ನಿಮ್ಮ ಹೆತ್ತವರ ಶಾಶ್ವತ ನೋವಿಗೆ ಪರಿಹಾರವೇನು? ದೇವರು ಕೂಡ ನಿಮ್ಮನ್ನು ಉಳಿಸುವುದಿಲ್ಲ. ಏನೆಂದು ಅವರ ಅಭಿಮಾನಿಗಳಾಗಿದ್ದೀರಿ ಅವರೇನು ರಾಷ್ಟ್ರನಾಯಕರೆ? ನೆಲ ಜಲ ಭಾಷೆಗಾಗಿ ಜೀವತೆತ್ತವರೆ? ದೇಶ ನಾಡು ನುಡಿ ಇತ್ಯಾದಿ ವಿಚಾರಗಳು ಬಂದಾಗ ಮೈಗೆಲ್ಲಾ ಎಣ್ಣೆ ಸವರಿಕೊಂಡು ನುಣಿಚಿಕೊಳ್ಳುವವರು ಕೊನೆ ಪಕ್ಷ ನಿಮ್ಮ ಕುಟುಂಬಕ್ಕೆ ಸಾಂತ್ವನ ಹೇಳುವ ಔದಾರ್ಯವನ್ನೂ ತೋರದ ಮೂರ್ಖರಿಗೆ ನೀವು ಅಭಿಮಾನಿಗಳು. ನಿಮ್ಮ ನೋವು, ಸಾವುಗಳೆಲ್ಲವೂ ನಿಮ್ಮ ಕುಟುಂಬದ ಶಾಶ್ವತ ದುಃಖಗಳೇ ಹೊರತು ಸಾವಿನ ದಲ್ಲಾಳಿಗಳಲ್ಲ ಎಂಬ ಎಚ್ಚರಿಕೆ ನಿಮ್ಮನ್ನು ಕಾಡದ ಹೊರತು ಈ ಘಟನೆಗಳಿಗೆ ಸಾವಿಲ್ಲ.

– ಬ್ಯಾ.ರಾ. ಪ್ರಸನ್ನಕುಮಾರ್, ಬ್ಯಾಡರಹಳ್ಳಿ, ಕೃಷ್ಣರಾಜನಗರ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

20 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

20 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

20 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago