ಓದುಗರ ಪತ್ರ

ಓದುಗರ ಪತ್ರ: ಈ ಸಾವು ನ್ಯಾಯವೇ?

ಹೆತ್ತವರ ಕನಸುಗಳು ಅನಂತ, ಮಕ್ಕಳ ಸಾಧನೆಯನ್ನು ಕಣ್ತುಂಬಿಕೊಳ್ಳಲು ಆಸೆ ಪಡುತ್ತಾರೆ. ಕೊನೆಗೆ ಏನೂ ಮಾಡದಿದ್ದರೂ ಪರವಾಗಿಲ್ಲ ಮಕ್ಕಳು ನಮ್ಮ ಕಣ್ಣ ಮುಂದಿದ್ದರೆ ಸಾಕಪ್ಪಾ ಎಂದುಕೊಳ್ಳುತ್ತಾರೆ. ಆದರೆ ಇಂದಿನ ಯುವ ಪೀಳಿಗೆ ಕ್ರೀಡಾಭಿಮಾನದ ಹೆಸರಿನಲ್ಲಿ ಅತಿರೇಕದ ವರ್ತನೆ ತೋರಿ ದುರಂತವನ್ನು ಮೈಮೇಲೆ ಎಳೆದುಕೊಳ್ಳುತ್ತಿರುವುದು ವಿಪರ್ಯಾಸ.

ಏನಾಗಿದೆ ನಮ್ಮ ಸಮಾಜಕ್ಕೆ, ಯುವ ಜನತೆಗೆ? ಯಾಕೀ ಉನ್ಮಾದ? ಭಾವೋತ್ಕರ್ಷ? ರಾಜಕಾರಾಣಿಗಳ, ಸಿನಿಮಾ ನಟರ, ಕ್ರಿಕೆಟ್ ಆಟಗಾರರ ಹಿಂಬಾಲಕರಾಗಿ ಸಮಯ ವ್ಯರ್ಥ ಮಾಡಿಕೊಂಡು ನಿಮ್ಮ ವ್ಯಕ್ತಿತ್ವವನ್ನು, ಸಮಯವನ್ನು ವ್ಯರ್ಥ ಮಾಡಿಕೊಂಡು ಅವರ ಬದುಕನ್ನು ಉದ್ಧಾರ ಮಾಡುತ್ತಿದ್ದೀರಲ್ಲಾ ಏನನ್ನಬೇಕು ನಿಮಗೆ? ನಿಮ್ಮ ಹೆತ್ತವರ ಶಾಶ್ವತ ನೋವಿಗೆ ಪರಿಹಾರವೇನು? ದೇವರು ಕೂಡ ನಿಮ್ಮನ್ನು ಉಳಿಸುವುದಿಲ್ಲ. ಏನೆಂದು ಅವರ ಅಭಿಮಾನಿಗಳಾಗಿದ್ದೀರಿ ಅವರೇನು ರಾಷ್ಟ್ರನಾಯಕರೆ? ನೆಲ ಜಲ ಭಾಷೆಗಾಗಿ ಜೀವತೆತ್ತವರೆ? ದೇಶ ನಾಡು ನುಡಿ ಇತ್ಯಾದಿ ವಿಚಾರಗಳು ಬಂದಾಗ ಮೈಗೆಲ್ಲಾ ಎಣ್ಣೆ ಸವರಿಕೊಂಡು ನುಣಿಚಿಕೊಳ್ಳುವವರು ಕೊನೆ ಪಕ್ಷ ನಿಮ್ಮ ಕುಟುಂಬಕ್ಕೆ ಸಾಂತ್ವನ ಹೇಳುವ ಔದಾರ್ಯವನ್ನೂ ತೋರದ ಮೂರ್ಖರಿಗೆ ನೀವು ಅಭಿಮಾನಿಗಳು. ನಿಮ್ಮ ನೋವು, ಸಾವುಗಳೆಲ್ಲವೂ ನಿಮ್ಮ ಕುಟುಂಬದ ಶಾಶ್ವತ ದುಃಖಗಳೇ ಹೊರತು ಸಾವಿನ ದಲ್ಲಾಳಿಗಳಲ್ಲ ಎಂಬ ಎಚ್ಚರಿಕೆ ನಿಮ್ಮನ್ನು ಕಾಡದ ಹೊರತು ಈ ಘಟನೆಗಳಿಗೆ ಸಾವಿಲ್ಲ.

– ಬ್ಯಾ.ರಾ. ಪ್ರಸನ್ನಕುಮಾರ್, ಬ್ಯಾಡರಹಳ್ಳಿ, ಕೃಷ್ಣರಾಜನಗರ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

4 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

8 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

8 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

11 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

11 hours ago