ಓದುಗರ ಪತ್ರ
ಹೆತ್ತವರ ಕನಸುಗಳು ಅನಂತ, ಮಕ್ಕಳ ಸಾಧನೆಯನ್ನು ಕಣ್ತುಂಬಿಕೊಳ್ಳಲು ಆಸೆ ಪಡುತ್ತಾರೆ. ಕೊನೆಗೆ ಏನೂ ಮಾಡದಿದ್ದರೂ ಪರವಾಗಿಲ್ಲ ಮಕ್ಕಳು ನಮ್ಮ ಕಣ್ಣ ಮುಂದಿದ್ದರೆ ಸಾಕಪ್ಪಾ ಎಂದುಕೊಳ್ಳುತ್ತಾರೆ. ಆದರೆ ಇಂದಿನ ಯುವ ಪೀಳಿಗೆ ಕ್ರೀಡಾಭಿಮಾನದ ಹೆಸರಿನಲ್ಲಿ ಅತಿರೇಕದ ವರ್ತನೆ ತೋರಿ ದುರಂತವನ್ನು ಮೈಮೇಲೆ ಎಳೆದುಕೊಳ್ಳುತ್ತಿರುವುದು ವಿಪರ್ಯಾಸ.
ಏನಾಗಿದೆ ನಮ್ಮ ಸಮಾಜಕ್ಕೆ, ಯುವ ಜನತೆಗೆ? ಯಾಕೀ ಉನ್ಮಾದ? ಭಾವೋತ್ಕರ್ಷ? ರಾಜಕಾರಾಣಿಗಳ, ಸಿನಿಮಾ ನಟರ, ಕ್ರಿಕೆಟ್ ಆಟಗಾರರ ಹಿಂಬಾಲಕರಾಗಿ ಸಮಯ ವ್ಯರ್ಥ ಮಾಡಿಕೊಂಡು ನಿಮ್ಮ ವ್ಯಕ್ತಿತ್ವವನ್ನು, ಸಮಯವನ್ನು ವ್ಯರ್ಥ ಮಾಡಿಕೊಂಡು ಅವರ ಬದುಕನ್ನು ಉದ್ಧಾರ ಮಾಡುತ್ತಿದ್ದೀರಲ್ಲಾ ಏನನ್ನಬೇಕು ನಿಮಗೆ? ನಿಮ್ಮ ಹೆತ್ತವರ ಶಾಶ್ವತ ನೋವಿಗೆ ಪರಿಹಾರವೇನು? ದೇವರು ಕೂಡ ನಿಮ್ಮನ್ನು ಉಳಿಸುವುದಿಲ್ಲ. ಏನೆಂದು ಅವರ ಅಭಿಮಾನಿಗಳಾಗಿದ್ದೀರಿ ಅವರೇನು ರಾಷ್ಟ್ರನಾಯಕರೆ? ನೆಲ ಜಲ ಭಾಷೆಗಾಗಿ ಜೀವತೆತ್ತವರೆ? ದೇಶ ನಾಡು ನುಡಿ ಇತ್ಯಾದಿ ವಿಚಾರಗಳು ಬಂದಾಗ ಮೈಗೆಲ್ಲಾ ಎಣ್ಣೆ ಸವರಿಕೊಂಡು ನುಣಿಚಿಕೊಳ್ಳುವವರು ಕೊನೆ ಪಕ್ಷ ನಿಮ್ಮ ಕುಟುಂಬಕ್ಕೆ ಸಾಂತ್ವನ ಹೇಳುವ ಔದಾರ್ಯವನ್ನೂ ತೋರದ ಮೂರ್ಖರಿಗೆ ನೀವು ಅಭಿಮಾನಿಗಳು. ನಿಮ್ಮ ನೋವು, ಸಾವುಗಳೆಲ್ಲವೂ ನಿಮ್ಮ ಕುಟುಂಬದ ಶಾಶ್ವತ ದುಃಖಗಳೇ ಹೊರತು ಸಾವಿನ ದಲ್ಲಾಳಿಗಳಲ್ಲ ಎಂಬ ಎಚ್ಚರಿಕೆ ನಿಮ್ಮನ್ನು ಕಾಡದ ಹೊರತು ಈ ಘಟನೆಗಳಿಗೆ ಸಾವಿಲ್ಲ.
– ಬ್ಯಾ.ರಾ. ಪ್ರಸನ್ನಕುಮಾರ್, ಬ್ಯಾಡರಹಳ್ಳಿ, ಕೃಷ್ಣರಾಜನಗರ ತಾ.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…