ಓದುಗರ ಪತ್ರ
ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ ಸೆರೆಮನೆ ವಾಸ ಅನುಭವಿಸಬೇಕಾಗುತ್ತದೆ. ಇದರ ಬಗ್ಗೆ ಸರ್ವೊಚ್ಚ ನ್ಯಾಯಾಲಯವೇ ಅನೇಕ ಸಂದರ್ಭಗಳಲ್ಲಿ ಸ್ಪಷ್ಟನೆ ನೀಡಿದೆ. ಇದಕ್ಕೆ ವ್ಯತಿರಿಕ್ತವಾಗಿ, ಜೀವಾವಧಿ ಶಿಕ್ಷೆ ಎಂದರೆ ಕೇವಲ 14 ವರ್ಷಗಳ ಶಿಕ್ಷೆ ಮಾತ್ರ, ನಂತರ ಅವರನ್ನು ಬಿಡುಗಡೆ ಮಾಡಬಹುದು ಎಂಬ ಅಭಿಪ್ರಾಯ ಕೂಡ ವ್ಯಕ್ತವಾಗುತ್ತಿದೆ. ಕೆಲವು ರಾಜ್ಯ ಸರ್ಕಾರಗಳು ಸನ್ನಡತೆ ಆಧಾರದ ಮೇಲೆ ಕೆಲವು ಅಪರಾಧಿಗಳನ್ನು 12 ಅಥವಾ 14 ವರ್ಷಗಳ ನಂತರ ಬಿಡುಗಡೆ ಮಾಡುವ ಪರಿಪಾಠ ಇದೆ. ಇದಕ್ಕೆ ಸಂಬಂದಪಟ್ಟಂತೆ, ಸಂಬಂಧಪಟ್ಟ ರಾಜ್ಯಗಳ ರಾಜ್ಯಪಾಲರ ಅಥವಾ ರಾಷ್ಟ್ರಪತಿಗಳ ಪೂರ್ವಾನುಮತಿ ಬೇಕಾಗುತ್ತದೆ. ಆದ್ದರಿಂದ, ಜೀವಾವಧಿ ಶಿಕ್ಷೆ ಹಾಗೂ ಸನ್ನಡತೆಯ ಆಧಾರದ ಮೇಲೆ ಬಿಡುಗಡೆ ಇವುಗಳನ್ನು ನಾವು ಪ್ರತ್ಯೇಕವಾಗಿಯೇ ನೋಡಬೇಕಾಗುತ್ತದೆ. ಹೀಗಾಗಿ ಜೀವಾವಧಿ ಶಿಕ್ಷೆ ಎಂದರೆ ಅಪರಾಧಯ ಜೀವ ಇರುವತನಕ ಸೆರೆಮನೆವಾಸ ಅನುಭವಿಸಬೇಕಾಗುತ್ತದೆ. – ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…