ಓದುಗರ ಪತ್ರ
ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ ಸೆರೆಮನೆ ವಾಸ ಅನುಭವಿಸಬೇಕಾಗುತ್ತದೆ. ಇದರ ಬಗ್ಗೆ ಸರ್ವೊಚ್ಚ ನ್ಯಾಯಾಲಯವೇ ಅನೇಕ ಸಂದರ್ಭಗಳಲ್ಲಿ ಸ್ಪಷ್ಟನೆ ನೀಡಿದೆ. ಇದಕ್ಕೆ ವ್ಯತಿರಿಕ್ತವಾಗಿ, ಜೀವಾವಧಿ ಶಿಕ್ಷೆ ಎಂದರೆ ಕೇವಲ 14 ವರ್ಷಗಳ ಶಿಕ್ಷೆ ಮಾತ್ರ, ನಂತರ ಅವರನ್ನು ಬಿಡುಗಡೆ ಮಾಡಬಹುದು ಎಂಬ ಅಭಿಪ್ರಾಯ ಕೂಡ ವ್ಯಕ್ತವಾಗುತ್ತಿದೆ. ಕೆಲವು ರಾಜ್ಯ ಸರ್ಕಾರಗಳು ಸನ್ನಡತೆ ಆಧಾರದ ಮೇಲೆ ಕೆಲವು ಅಪರಾಧಿಗಳನ್ನು 12 ಅಥವಾ 14 ವರ್ಷಗಳ ನಂತರ ಬಿಡುಗಡೆ ಮಾಡುವ ಪರಿಪಾಠ ಇದೆ. ಇದಕ್ಕೆ ಸಂಬಂದಪಟ್ಟಂತೆ, ಸಂಬಂಧಪಟ್ಟ ರಾಜ್ಯಗಳ ರಾಜ್ಯಪಾಲರ ಅಥವಾ ರಾಷ್ಟ್ರಪತಿಗಳ ಪೂರ್ವಾನುಮತಿ ಬೇಕಾಗುತ್ತದೆ. ಆದ್ದರಿಂದ, ಜೀವಾವಧಿ ಶಿಕ್ಷೆ ಹಾಗೂ ಸನ್ನಡತೆಯ ಆಧಾರದ ಮೇಲೆ ಬಿಡುಗಡೆ ಇವುಗಳನ್ನು ನಾವು ಪ್ರತ್ಯೇಕವಾಗಿಯೇ ನೋಡಬೇಕಾಗುತ್ತದೆ. ಹೀಗಾಗಿ ಜೀವಾವಧಿ ಶಿಕ್ಷೆ ಎಂದರೆ ಅಪರಾಧಯ ಜೀವ ಇರುವತನಕ ಸೆರೆಮನೆವಾಸ ಅನುಭವಿಸಬೇಕಾಗುತ್ತದೆ. – ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…