ತಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಮಲಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಯೇ ಹರಡಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ.
ಈ ಗ್ರಾಮಗಳ ರಸ್ತೆ, ಚರಂಡಿ, ಕೆರೆ, ಕಾಲುವೆಗಳಲ್ಲಿ ಕಸದ ರಾಶಿಯೇ ಹರಡಿದ್ದರೂ ಗ್ರಾಮ ಪಂಚಾಯಿ ಯವರು ಸ್ವಚ್ಛಗೊಳಿಸುವ ಗೋಜಿಗೆ ಹೋಗಿಲ್ಲ. ಇದರಿಂದಾಗಿ ಇಲ್ಲಿ ಚರಂಡಿಗೆ ಪ್ಲಾಸ್ಟಿಕ್ ಕವರ್ಗಳು, ಚೀಲ, ಬಾಟಲಿಗಳು ಕಟ್ಟಿಕೊಳ್ಳುತ್ತಿದ್ದು, ನೀರು ನಿಂತು ದುರ್ವಾಸನೆ ಬೀರಲಾರಂಭಿಸಿದೆ. ಇದರಿಂದಾಗಿ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಇನ್ನು ಎಲ್ಲ ರಸ್ತೆಗಳ ಎರಡೂ ಅಂಚುಗಳಲ್ಲಿ ಗಿಡಗಂಟಿ ಬೆಳೆದುಕೊಂಡಿದ್ದು, ವಾಹನ ಸವಾರರಿಗೆ ಎದುರುಗಡೆಯಿಂದ ಬರುವ ವಾಹನಗಳು ಕಾಣದ ಅಪಘಾತಗಳಾಗುವ ಅಪಾಯವಿದೆ. ಈ ಸಂಬಂಧ ಸಾಕಷ್ಟು ಬಾರಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮೇಲಾಧಿಕಾರಿಗಳು ಈ ಬಗ್ಗೆ ಗಮನಹರಿಸಿ ಗ್ರಾಮಗಳ ಸ್ವಚ್ಛತೆಗೆ ಕ್ರಮಕೈಗೊಳ್ಳಬೇಕಿದೆ. -ಎನ್. ವಿನೋದ್, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ, ಮಾನಸಗಂಗೋತ್ರಿ, ಮೈಸೂರು.
ನವದೆಹಲಿ : ಹ್ಯಾಜಲ್ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…
ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…
ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…