10ನೇ ತರಗತಿ ಅಥವಾ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಕೆಲವು ಇಲಾಖೆಗಳಲ್ಲಿನ ಗ್ರೂಪ್ ಡಿ ನೌಕರರ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು, ಈ ಪದ್ಧತಿಯನ್ನು ರದ್ದು ಮಾಡಿ ಆ ಹುದ್ದೆಗಳ ನೇಮಕಾತಿಗೂ ಸ್ಪರ್ಧಾ ತ್ಮಕ ಪರೀಕ್ಷೆ ನಡೆಸಬೇಕಿದೆ.
ಸರ್ಕಾರ ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುತ್ತದೆ. ಆದರೆ ಗ್ರೂಪ್ ಡಿ ಸೇರಿದಂತೆ ಕೆಲವು ಹುದ್ದೆಗಳ ನೇಮಕಾತಿಗೆ ಮಾತ್ರ 10ನೇ ತರಗತಿ ಮತ್ತು ಪಿಯುಸಿಯಲ್ಲಿ ಗಳಿಸಿದ ಅಂಕಗಳನ್ನು ಆಧಾರವಾಗಿಟ್ಟು ಕೊಂಡು ನೇಮಕಾತಿ ಮಾಡಿಕೊಳ್ಳುತ್ತಿರುವುದರಿಂದ ಕಡಿಮೆ ಅಂಕ ಗಳಿಸಿದ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತಿದೆ.
ಕೇಂದ್ರ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್ಸಿ)ಯನ್ನು ಒಳಗೊಂಡಂತೆ ಬಹುತೇಕ ಎಲ್ಲ ಉನ್ನತ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಕಡ್ಡಾಯವಾಗಿದೆ. ಇತ್ತೀಚೆಗೆ ಕೆಪಿಟಿಸಿಎಲ್ನ ವಿವಿಧ ಸರಬರಾಜು ನಿಗಮಗಳಲ್ಲಿನ ಕಿರಿಯ ಪರಿಚಾರಕ, ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಇಲ್ಲಿಯೂ ಅಂಕಗಳ ಮಾನದಂಡವನ್ನು ಕೈಬಿಟ್ಟು ಸ್ಪರ್ಧಾತ್ಮಕ ಪರೀಕ್ಷೆ ನಡೆಸಬೇಕಿದೆ.
-ಅನಿಲ್ ಕುಮಾರ್, ನಂಜನಗೂಡು ತಾ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…