ಓದುಗರ ಪತ್ರ

ಓದುಗರ ಪತ್ರ | ಕೆರೆಗಳ ಉಳಿವಿಗೆ ಜಿಯೋ ಫೆನ್ಸಿಂಗ್ ಕಡ್ಡಾಯಗೊಳಿಸಿ

ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ ಶೇ.60ರಷ್ಟು ಕುಗ್ಗಿದೆ. ಈ ಹಿನ್ನೆಲೆಯಲ್ಲಿ ಜಿಯೋ ಫೆನ್ಸಿಂಗ್ ಮತ್ತು ಮಾಹಿತಿ ಫಲಕಗಳ ಅಳವಡಿಕೆ ಕೇವಲ ತಾಂತ್ರಿಕ ಪ್ರಕ್ರಿಯೆಯಲ್ಲ. ಅದು ಕೆರೆಗಳ ಉಳಿವಿಗಾಗಿ ಇರುವ ಡಿಜಿಟಲ್ ಕವಚ. ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆ ಅಡಿಯಲ್ಲಿ ಕೆರೆಗಳಿಗೆ ಹಾನಿ ಮಾಡುವುದು ಶಿಕ್ಷಾರ್ಹ ಅಪರಾಧ. ಆದರೆ ಅನುಷ್ಠಾನದಲ್ಲಿ ಹಿನ್ನಡೆಯಾಗುತ್ತಿದೆ. ರಾಜ್ಯ ಸರ್ಕಾರವು ಕೂಡಲೇ ಎಲ್ಲಾ ಕೆರೆಗಳ ನಕ್ಷೆಯನ್ನು ‘ದಿಶಾಂಕ್’ ಅಪ್ಲಿಕೇಶನ್‌ನಲ್ಲಿ ಕಡ್ಡಾಯವಾಗಿ ಅಪ್ಲೇಟ್ ಮಾಡಬೇಕು. ಹೀಗಾಗಿ ಪ್ರತಿ ಕೆರೆಯ ಬದಿಯಲ್ಲಿ ಸರ್ವೆ ನಂಬ‌ ವಿಸ್ತೀರ್ಣ ಮತ್ತು ಅತಿಕ್ರಮಣ ಮಾಡಿದರೆ ಆಗುವ ಕಾನೂನು ಕ್ರಮಗಳ ಬಗ್ಗೆ ಎಚ್ಚರಿಕೆ ಫಲಕ ಹಾಕುವುದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಹಕಾರಿಯಾಗಲಿದೆ. ಕೆರೆ ಸಂರಕ್ಷಣೆ ಎಂಬುದು ಕೇವಲ ಒಂದು ಇಲಾಖೆಯ ಕೆಲಸವಾಗದೆ ಜನ ಚಳವಳಿಯಾಗಬೇಕಿದೆ.
ಡಾ. ಎಚ್.ಕೆ. ವಿಜಯಕುಮಾರ, ಬೆಂಗಳೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

3 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

3 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

3 hours ago

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

13 hours ago