ಓದುಗರ ಪತ್ರ

ಓದುಗರ ಪತ್ರ | ಮಧ್ಯಾಹ್ನದ ವೇಳೆ ಸಿಗ್ನಲ್‌ ಫ್ರೀ ಮಾಡಿ

ಬೇಸಿಗೆಕಾಲ ಆರಂಭಗೊಳ್ಳುತ್ತಿದ್ದು, ದಿನೇದಿನೇ ತಾಪಮಾನ ಏರಿಕೆ ಯಾಗುತ್ತಿದೆ. ಅದರಲ್ಲಿಯೂ ಮಧ್ಯಾಹ್ನ ೧೨ ಗಂಟೆಯಾಗುತ್ತಿದ್ದಂತೆ ಉಷ್ಣಾಂಶ ೩೦ ಡಿಗ್ರಿ ದಾಟುತ್ತಿದ್ದು, ಉರಿಯುವ ಬಿಸಿಲಿನಲ್ಲಿ ರಸ್ತೆಗಿಳಿಯು ವುದೇ ಕಷ್ಟವಾಗಿದೆ.

ಮೈಸೂರಿನ ಕೆಲವು ವೃತ್ತಗಳಲ್ಲಿ ಸಿಗ್ನಲ್ ಲೈಟ್‌ಗಳು ಬೆಳಿಗ್ಗೆಯಿಂದ ರಾತ್ರಿ ಯವರೆಗೂ ಕಾರ್ಯನಿರ್ವಹಿಸುತ್ತಿದ್ದು, ಮಧ್ಯಾಹ್ನದ ವೇಳೆ ವಾಹನ ದಟ್ಟಣೆ ಇಲ್ಲದಿದ್ದರೂ ಜನರು ಬಿಸಿಲಿನಲ್ಲೇ ನಿಲ್ಲುವಂತಾಗಿದೆ. ಸಾಮಾನ್ಯ ವಾಗಿ ಮೈಸೂರಿನಲ್ಲಿ ಬೆಳಿಗ್ಗೆ ೬ರಿಂದ ೧೧ ಗಂಟೆಯವರೆಗೆ ಹಾಗೂ ಸಂಜೆ ೪ರಿಂದ ೯ ಗಂಟೆಯವರೆಗೆ ವಾಹನದಟ್ಟಣೆ ಹೆಚ್ಚಾಗಿರುತ್ತದೆ. ಈ ಸಂದರ್ಭ ದಲ್ಲಿ ಸಿಗ್ನಲ್ ಲೈಟ್‌ಗಳು ಅತ್ಯವಶ್ಯ. ಆದರೆ ಕೆಲ ಭಾಗಗಳಲ್ಲಿ ವಾಹನ ದಟ್ಟಣೆ ಇಲ್ಲದಿದ್ದರೂ ಸಿಗ್ನಲ್ ಲೈಟ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಸುಡುವ ಬಿಸಿಲಿನಲ್ಲಿ ವಾಹನ ಸವಾರರು ರಸ್ತೆಯಲ್ಲಿ ನಿಲ್ಲುವಂತಾಗಿದೆ. ಇದರಿಂದಾಗಿ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಹನ ಗಳಲ್ಲಿ ಸಂಚರಿಸುವಾಗ, ಬಿಸಿಲಿನ ತಾಪಕ್ಕೆ ಅಸ್ವಸ್ಥಗೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಸಂಚಾರ ಪೊಲೀಸರು ಈ ಬಗ್ಗೆ ಗಮನಹರಿಸಿ ವಾಹನ ದಟ್ಟಣೆ ಕಡಿಮೆ ಇರುವ ಆದಿಚುಂಚನಗಿರಿ ರಸ್ತೆಯ ಅಗರ್‌ವಾಲ್ ಕಣ್ಣಿನ ಆಸ್ಪತ್ರೆ ವೃತ್ತ, ಕುವೆಂಪು ನಗರದ ಕಾಂಪ್ಲೆಕ್ಸ್ ವೃತ್ತ ಸೇರಿದಂತೆ ಇತರೆ ಸರ್ಕಲ್‌ಗಳಲ್ಲಿ ಮಧ್ಯಾಹ್ನದ ವೇಳೆ ಸಿಗ್ನಲ್ ಫ್ರೀ ಮಾಡುವುದು ಒಳಿತು. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago