ಓದುಗರ ಪತ್ರ
ಬೇಸಿಗೆಕಾಲ ಆರಂಭಗೊಳ್ಳುತ್ತಿದ್ದು, ದಿನೇದಿನೇ ತಾಪಮಾನ ಏರಿಕೆ ಯಾಗುತ್ತಿದೆ. ಅದರಲ್ಲಿಯೂ ಮಧ್ಯಾಹ್ನ ೧೨ ಗಂಟೆಯಾಗುತ್ತಿದ್ದಂತೆ ಉಷ್ಣಾಂಶ ೩೦ ಡಿಗ್ರಿ ದಾಟುತ್ತಿದ್ದು, ಉರಿಯುವ ಬಿಸಿಲಿನಲ್ಲಿ ರಸ್ತೆಗಿಳಿಯು ವುದೇ ಕಷ್ಟವಾಗಿದೆ.
ಮೈಸೂರಿನ ಕೆಲವು ವೃತ್ತಗಳಲ್ಲಿ ಸಿಗ್ನಲ್ ಲೈಟ್ಗಳು ಬೆಳಿಗ್ಗೆಯಿಂದ ರಾತ್ರಿ ಯವರೆಗೂ ಕಾರ್ಯನಿರ್ವಹಿಸುತ್ತಿದ್ದು, ಮಧ್ಯಾಹ್ನದ ವೇಳೆ ವಾಹನ ದಟ್ಟಣೆ ಇಲ್ಲದಿದ್ದರೂ ಜನರು ಬಿಸಿಲಿನಲ್ಲೇ ನಿಲ್ಲುವಂತಾಗಿದೆ. ಸಾಮಾನ್ಯ ವಾಗಿ ಮೈಸೂರಿನಲ್ಲಿ ಬೆಳಿಗ್ಗೆ ೬ರಿಂದ ೧೧ ಗಂಟೆಯವರೆಗೆ ಹಾಗೂ ಸಂಜೆ ೪ರಿಂದ ೯ ಗಂಟೆಯವರೆಗೆ ವಾಹನದಟ್ಟಣೆ ಹೆಚ್ಚಾಗಿರುತ್ತದೆ. ಈ ಸಂದರ್ಭ ದಲ್ಲಿ ಸಿಗ್ನಲ್ ಲೈಟ್ಗಳು ಅತ್ಯವಶ್ಯ. ಆದರೆ ಕೆಲ ಭಾಗಗಳಲ್ಲಿ ವಾಹನ ದಟ್ಟಣೆ ಇಲ್ಲದಿದ್ದರೂ ಸಿಗ್ನಲ್ ಲೈಟ್ಗಳು ಕಾರ್ಯನಿರ್ವಹಿಸುತ್ತಿದ್ದು, ಸುಡುವ ಬಿಸಿಲಿನಲ್ಲಿ ವಾಹನ ಸವಾರರು ರಸ್ತೆಯಲ್ಲಿ ನಿಲ್ಲುವಂತಾಗಿದೆ. ಇದರಿಂದಾಗಿ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಹನ ಗಳಲ್ಲಿ ಸಂಚರಿಸುವಾಗ, ಬಿಸಿಲಿನ ತಾಪಕ್ಕೆ ಅಸ್ವಸ್ಥಗೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಸಂಚಾರ ಪೊಲೀಸರು ಈ ಬಗ್ಗೆ ಗಮನಹರಿಸಿ ವಾಹನ ದಟ್ಟಣೆ ಕಡಿಮೆ ಇರುವ ಆದಿಚುಂಚನಗಿರಿ ರಸ್ತೆಯ ಅಗರ್ವಾಲ್ ಕಣ್ಣಿನ ಆಸ್ಪತ್ರೆ ವೃತ್ತ, ಕುವೆಂಪು ನಗರದ ಕಾಂಪ್ಲೆಕ್ಸ್ ವೃತ್ತ ಸೇರಿದಂತೆ ಇತರೆ ಸರ್ಕಲ್ಗಳಲ್ಲಿ ಮಧ್ಯಾಹ್ನದ ವೇಳೆ ಸಿಗ್ನಲ್ ಫ್ರೀ ಮಾಡುವುದು ಒಳಿತು. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…