ಓದುಗರ ಪತ್ರ

ಓದುಗರ ಪತ್ರ| ಸಮಸ್ಯೆಗಳ ಸುಳಿಯಲ್ಲಿ ಮಂಡ್ಯದ ಅಂಡರ್ ಪಾಸ್

ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿಯೇ ಸಾರ್ವಜನಿಕರು ಸುರಕ್ಷಿತವಾಗಿ ರಸ್ತೆ ದಾಟಲಿ ಎಂಬ ಉದ್ದೇಶದಿಂದ ಅಂಡರ್ ಪಾಸನ್ನು ನಿರ್ಮಿಸಲಾಗಿದೆ.

ಈ ಅಂಡರ್ ಪಾಸ್ ನಿರ್ಮಿಸಿ ೨೫ ವರ್ಷಗಳ ಮೇಲಾಗಿದ್ದು, ನಿರ್ವಹಣೆಯ ಕೊರತೆಯಿಂದಾಗಿ ಸಂಪೂರ್ಣ ಹದಗೆಟ್ಟುಹೋಗಿದೆ. ಅಲ್ಲದೆ ಇಲ್ಲಿನ ಅನೈರ್ಮಲ್ಯ ವಾತಾವರಣದಿಂದಾಗಿ ಸಾರ್ವ ಜನಿಕರು ತಿರುಗಾಡಲು ಪರದಾಡುವಂತಾಗಿದೆ. ಈ ಅಂಡರ್ ಪಾಸ್‌ನಲ್ಲಿ ಸರಿಯಾದ ವಿದ್ಯುತ್ ದೀಪಗಳಿಲ್ಲದೆ ರಾತ್ರಿಯಾದರೆ ಸಾರ್ವಜನಿಕರು ಓಡಾಡಲು ತೊಂದರೆ ಉಂಟಾಗಿದೆ. ಅಲ್ಲದೆ ಮಳೆಗಾಲ ದಲ್ಲಿ ನೀರು ತುಂಬಿಕೊಳ್ಳುತ್ತಿದ್ದು, ಸಾರ್ವ ಜನಿಕರು ನೀರಿನಲ್ಲೇ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.

ಇನ್ನು ಕತ್ತಲಾಗುತ್ತಿದ್ದಂತೆಯೇ ಈ ಅಂಡರ್‌ಪಾಸ್ ಅನೈತಿಕ ಚಟುವಟಿಕೆಗಳ ತಾಣವಾಗಿ ಹೋಗಿರುತ್ತದೆ. ಮದ್ಯವ್ಯಸನಿಗಳು ಅಂಡರ್‌ಪಾಸ್ ನಲ್ಲಿ ನಿಂತು ಕುಡಿದು ಅನುಚಿತವಾಗಿ ವರ್ತಿಸುತ್ತಾರೆ. ಇದರಿಂದಾಗಿ ಮಹಿಳೆಯರು ಹಾಗೂ ಮಕ್ಕಳು ಈ ರಸ್ತೆಯಲ್ಲಿ ತಿರುಗಾಡಲು ಆತಂಕಪಡುವಂತಾಗಿದೆ.

ಅಂಡರ್‌ಪಾಸ್‌ನಲ್ಲಿರುವ ಇಷ್ಟೆಲ್ಲ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಸಾರ್ವಜನಿಕರಿಂದ ದೂರುಗಳು ಸಲ್ಲಿಕೆಯಾಗುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಆದ್ದರಿಂದ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಅಂಡರ್‌ಪಾಸ್‌ನಲ್ಲಿನ ಸಮಸ್ಯೆಗಳನ್ನು ಪರಿಹರಿಸಬೇಕು.
-ಜೆ. ಅನುಷ, ಪತ್ರಿಕೋದ್ಯಮ ವಿಭಾಗ, ಮಹಿಳಾ ಸರ್ಕಾರಿ ಕಾಲೇಜು, ಮಂಡ್ಯ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

35 mins ago

ಚೆಕ್‌ ಬೌನ್ಸ್‌ ಕೇಸ್ : ಶಾಲಾ ಕಾರ್ಯದರ್ಶಿಗೆ ಕೊಲೆ ಬೆದರಿಕೆ :‌ ಶಾಲೆ ಕಿಟಕಿ ಗಾಜು ಹೊಡೆದು ಪುಂಡಾಟ : ಇಬ್ಬರ ವಿರುದ್ಧ ದೂರು

ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್‌ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…

1 hour ago

‌ಶಾಮನೂರು | ಓದಿದ್ದು 10ನೇ ತರಗತಿ ; ಕಟ್ಟಿದ್ದು ಬೃಹತ್ ಶಿಕ್ಷಣ ಸಾಮ್ರಾಜ್ಯ…..!

ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.…

1 hour ago

ಫಸಲು ಬಿಮಾ : ಬಿಜೆಪಿ ಪ್ರಾಯೋಜಿತ ಗೋಲ್ಮಾಲ್ ಯೋಜನೆ : ಸಚಿವ ಖಂಡ್ರೆ

ಬೆಂಗಳೂರು : ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ…

2 hours ago

ದಿಲ್ಲಿಯಲ್ಲಿ ಮೆಸ್ಸಿ : ಮೋದಿ ಭೇಟಿ ನಿರೀಕ್ಷೆ, ಹ್ಯಾಂಡ್‌ಶೇಕ್‌ಗೆ 1 ಕೋಟಿ ರೂ.!

ಹೊಸದಿಲ್ಲಿ : ಮೂರು ದಿನಗಳ ಕಾಲ ಭಾರತ ಪ್ರವಾಸಕ್ಕೆ ಆಗಮಿಸಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಡಿಸೆಂಬರ್‌ 15, ಸೋಮವಾರ  

2 hours ago