ಓದುಗರ ಪತ್ರ

ಓದುಗರ ಪತ್ರ| ಸಮಸ್ಯೆಗಳ ಸುಳಿಯಲ್ಲಿ ಮಂಡ್ಯದ ಅಂಡರ್ ಪಾಸ್

ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿಯೇ ಸಾರ್ವಜನಿಕರು ಸುರಕ್ಷಿತವಾಗಿ ರಸ್ತೆ ದಾಟಲಿ ಎಂಬ ಉದ್ದೇಶದಿಂದ ಅಂಡರ್ ಪಾಸನ್ನು ನಿರ್ಮಿಸಲಾಗಿದೆ.

ಈ ಅಂಡರ್ ಪಾಸ್ ನಿರ್ಮಿಸಿ ೨೫ ವರ್ಷಗಳ ಮೇಲಾಗಿದ್ದು, ನಿರ್ವಹಣೆಯ ಕೊರತೆಯಿಂದಾಗಿ ಸಂಪೂರ್ಣ ಹದಗೆಟ್ಟುಹೋಗಿದೆ. ಅಲ್ಲದೆ ಇಲ್ಲಿನ ಅನೈರ್ಮಲ್ಯ ವಾತಾವರಣದಿಂದಾಗಿ ಸಾರ್ವ ಜನಿಕರು ತಿರುಗಾಡಲು ಪರದಾಡುವಂತಾಗಿದೆ. ಈ ಅಂಡರ್ ಪಾಸ್‌ನಲ್ಲಿ ಸರಿಯಾದ ವಿದ್ಯುತ್ ದೀಪಗಳಿಲ್ಲದೆ ರಾತ್ರಿಯಾದರೆ ಸಾರ್ವಜನಿಕರು ಓಡಾಡಲು ತೊಂದರೆ ಉಂಟಾಗಿದೆ. ಅಲ್ಲದೆ ಮಳೆಗಾಲ ದಲ್ಲಿ ನೀರು ತುಂಬಿಕೊಳ್ಳುತ್ತಿದ್ದು, ಸಾರ್ವ ಜನಿಕರು ನೀರಿನಲ್ಲೇ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.

ಇನ್ನು ಕತ್ತಲಾಗುತ್ತಿದ್ದಂತೆಯೇ ಈ ಅಂಡರ್‌ಪಾಸ್ ಅನೈತಿಕ ಚಟುವಟಿಕೆಗಳ ತಾಣವಾಗಿ ಹೋಗಿರುತ್ತದೆ. ಮದ್ಯವ್ಯಸನಿಗಳು ಅಂಡರ್‌ಪಾಸ್ ನಲ್ಲಿ ನಿಂತು ಕುಡಿದು ಅನುಚಿತವಾಗಿ ವರ್ತಿಸುತ್ತಾರೆ. ಇದರಿಂದಾಗಿ ಮಹಿಳೆಯರು ಹಾಗೂ ಮಕ್ಕಳು ಈ ರಸ್ತೆಯಲ್ಲಿ ತಿರುಗಾಡಲು ಆತಂಕಪಡುವಂತಾಗಿದೆ.

ಅಂಡರ್‌ಪಾಸ್‌ನಲ್ಲಿರುವ ಇಷ್ಟೆಲ್ಲ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಸಾರ್ವಜನಿಕರಿಂದ ದೂರುಗಳು ಸಲ್ಲಿಕೆಯಾಗುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಆದ್ದರಿಂದ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಅಂಡರ್‌ಪಾಸ್‌ನಲ್ಲಿನ ಸಮಸ್ಯೆಗಳನ್ನು ಪರಿಹರಿಸಬೇಕು.
-ಜೆ. ಅನುಷ, ಪತ್ರಿಕೋದ್ಯಮ ವಿಭಾಗ, ಮಹಿಳಾ ಸರ್ಕಾರಿ ಕಾಲೇಜು, ಮಂಡ್ಯ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

8 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

11 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

12 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

12 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

12 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

13 hours ago