ಮಂಡ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿಯೇ ಸಾರ್ವಜನಿಕರು ಸುರಕ್ಷಿತವಾಗಿ ರಸ್ತೆ ದಾಟಲಿ ಎಂಬ ಉದ್ದೇಶದಿಂದ ಅಂಡರ್ ಪಾಸನ್ನು ನಿರ್ಮಿಸಲಾಗಿದೆ.
ಈ ಅಂಡರ್ ಪಾಸ್ ನಿರ್ಮಿಸಿ ೨೫ ವರ್ಷಗಳ ಮೇಲಾಗಿದ್ದು, ನಿರ್ವಹಣೆಯ ಕೊರತೆಯಿಂದಾಗಿ ಸಂಪೂರ್ಣ ಹದಗೆಟ್ಟುಹೋಗಿದೆ. ಅಲ್ಲದೆ ಇಲ್ಲಿನ ಅನೈರ್ಮಲ್ಯ ವಾತಾವರಣದಿಂದಾಗಿ ಸಾರ್ವ ಜನಿಕರು ತಿರುಗಾಡಲು ಪರದಾಡುವಂತಾಗಿದೆ. ಈ ಅಂಡರ್ ಪಾಸ್ನಲ್ಲಿ ಸರಿಯಾದ ವಿದ್ಯುತ್ ದೀಪಗಳಿಲ್ಲದೆ ರಾತ್ರಿಯಾದರೆ ಸಾರ್ವಜನಿಕರು ಓಡಾಡಲು ತೊಂದರೆ ಉಂಟಾಗಿದೆ. ಅಲ್ಲದೆ ಮಳೆಗಾಲ ದಲ್ಲಿ ನೀರು ತುಂಬಿಕೊಳ್ಳುತ್ತಿದ್ದು, ಸಾರ್ವ ಜನಿಕರು ನೀರಿನಲ್ಲೇ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.
ಇನ್ನು ಕತ್ತಲಾಗುತ್ತಿದ್ದಂತೆಯೇ ಈ ಅಂಡರ್ಪಾಸ್ ಅನೈತಿಕ ಚಟುವಟಿಕೆಗಳ ತಾಣವಾಗಿ ಹೋಗಿರುತ್ತದೆ. ಮದ್ಯವ್ಯಸನಿಗಳು ಅಂಡರ್ಪಾಸ್ ನಲ್ಲಿ ನಿಂತು ಕುಡಿದು ಅನುಚಿತವಾಗಿ ವರ್ತಿಸುತ್ತಾರೆ. ಇದರಿಂದಾಗಿ ಮಹಿಳೆಯರು ಹಾಗೂ ಮಕ್ಕಳು ಈ ರಸ್ತೆಯಲ್ಲಿ ತಿರುಗಾಡಲು ಆತಂಕಪಡುವಂತಾಗಿದೆ.
ಅಂಡರ್ಪಾಸ್ನಲ್ಲಿರುವ ಇಷ್ಟೆಲ್ಲ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಸಾರ್ವಜನಿಕರಿಂದ ದೂರುಗಳು ಸಲ್ಲಿಕೆಯಾಗುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಆದ್ದರಿಂದ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಅಂಡರ್ಪಾಸ್ನಲ್ಲಿನ ಸಮಸ್ಯೆಗಳನ್ನು ಪರಿಹರಿಸಬೇಕು.
-ಜೆ. ಅನುಷ, ಪತ್ರಿಕೋದ್ಯಮ ವಿಭಾಗ, ಮಹಿಳಾ ಸರ್ಕಾರಿ ಕಾಲೇಜು, ಮಂಡ್ಯ.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…