ಮಂಡ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿಯೇ ಸಾರ್ವಜನಿಕರು ಸುರಕ್ಷಿತವಾಗಿ ರಸ್ತೆ ದಾಟಲಿ ಎಂಬ ಉದ್ದೇಶದಿಂದ ಅಂಡರ್ ಪಾಸನ್ನು ನಿರ್ಮಿಸಲಾಗಿದೆ.
ಈ ಅಂಡರ್ ಪಾಸ್ ನಿರ್ಮಿಸಿ ೨೫ ವರ್ಷಗಳ ಮೇಲಾಗಿದ್ದು, ನಿರ್ವಹಣೆಯ ಕೊರತೆಯಿಂದಾಗಿ ಸಂಪೂರ್ಣ ಹದಗೆಟ್ಟುಹೋಗಿದೆ. ಅಲ್ಲದೆ ಇಲ್ಲಿನ ಅನೈರ್ಮಲ್ಯ ವಾತಾವರಣದಿಂದಾಗಿ ಸಾರ್ವ ಜನಿಕರು ತಿರುಗಾಡಲು ಪರದಾಡುವಂತಾಗಿದೆ. ಈ ಅಂಡರ್ ಪಾಸ್ನಲ್ಲಿ ಸರಿಯಾದ ವಿದ್ಯುತ್ ದೀಪಗಳಿಲ್ಲದೆ ರಾತ್ರಿಯಾದರೆ ಸಾರ್ವಜನಿಕರು ಓಡಾಡಲು ತೊಂದರೆ ಉಂಟಾಗಿದೆ. ಅಲ್ಲದೆ ಮಳೆಗಾಲ ದಲ್ಲಿ ನೀರು ತುಂಬಿಕೊಳ್ಳುತ್ತಿದ್ದು, ಸಾರ್ವ ಜನಿಕರು ನೀರಿನಲ್ಲೇ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.
ಇನ್ನು ಕತ್ತಲಾಗುತ್ತಿದ್ದಂತೆಯೇ ಈ ಅಂಡರ್ಪಾಸ್ ಅನೈತಿಕ ಚಟುವಟಿಕೆಗಳ ತಾಣವಾಗಿ ಹೋಗಿರುತ್ತದೆ. ಮದ್ಯವ್ಯಸನಿಗಳು ಅಂಡರ್ಪಾಸ್ ನಲ್ಲಿ ನಿಂತು ಕುಡಿದು ಅನುಚಿತವಾಗಿ ವರ್ತಿಸುತ್ತಾರೆ. ಇದರಿಂದಾಗಿ ಮಹಿಳೆಯರು ಹಾಗೂ ಮಕ್ಕಳು ಈ ರಸ್ತೆಯಲ್ಲಿ ತಿರುಗಾಡಲು ಆತಂಕಪಡುವಂತಾಗಿದೆ.
ಅಂಡರ್ಪಾಸ್ನಲ್ಲಿರುವ ಇಷ್ಟೆಲ್ಲ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಸಾರ್ವಜನಿಕರಿಂದ ದೂರುಗಳು ಸಲ್ಲಿಕೆಯಾಗುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಆದ್ದರಿಂದ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಅಂಡರ್ಪಾಸ್ನಲ್ಲಿನ ಸಮಸ್ಯೆಗಳನ್ನು ಪರಿಹರಿಸಬೇಕು.
-ಜೆ. ಅನುಷ, ಪತ್ರಿಕೋದ್ಯಮ ವಿಭಾಗ, ಮಹಿಳಾ ಸರ್ಕಾರಿ ಕಾಲೇಜು, ಮಂಡ್ಯ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…