ಓದುಗರ ಪತ್ರ

ಓದುಗರ ಪತ್ರ| ಸಮಸ್ಯೆಗಳ ಸುಳಿಯಲ್ಲಿ ಮಂಡ್ಯದ ಅಂಡರ್ ಪಾಸ್

ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿಯೇ ಸಾರ್ವಜನಿಕರು ಸುರಕ್ಷಿತವಾಗಿ ರಸ್ತೆ ದಾಟಲಿ ಎಂಬ ಉದ್ದೇಶದಿಂದ ಅಂಡರ್ ಪಾಸನ್ನು ನಿರ್ಮಿಸಲಾಗಿದೆ.

ಈ ಅಂಡರ್ ಪಾಸ್ ನಿರ್ಮಿಸಿ ೨೫ ವರ್ಷಗಳ ಮೇಲಾಗಿದ್ದು, ನಿರ್ವಹಣೆಯ ಕೊರತೆಯಿಂದಾಗಿ ಸಂಪೂರ್ಣ ಹದಗೆಟ್ಟುಹೋಗಿದೆ. ಅಲ್ಲದೆ ಇಲ್ಲಿನ ಅನೈರ್ಮಲ್ಯ ವಾತಾವರಣದಿಂದಾಗಿ ಸಾರ್ವ ಜನಿಕರು ತಿರುಗಾಡಲು ಪರದಾಡುವಂತಾಗಿದೆ. ಈ ಅಂಡರ್ ಪಾಸ್‌ನಲ್ಲಿ ಸರಿಯಾದ ವಿದ್ಯುತ್ ದೀಪಗಳಿಲ್ಲದೆ ರಾತ್ರಿಯಾದರೆ ಸಾರ್ವಜನಿಕರು ಓಡಾಡಲು ತೊಂದರೆ ಉಂಟಾಗಿದೆ. ಅಲ್ಲದೆ ಮಳೆಗಾಲ ದಲ್ಲಿ ನೀರು ತುಂಬಿಕೊಳ್ಳುತ್ತಿದ್ದು, ಸಾರ್ವ ಜನಿಕರು ನೀರಿನಲ್ಲೇ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.

ಇನ್ನು ಕತ್ತಲಾಗುತ್ತಿದ್ದಂತೆಯೇ ಈ ಅಂಡರ್‌ಪಾಸ್ ಅನೈತಿಕ ಚಟುವಟಿಕೆಗಳ ತಾಣವಾಗಿ ಹೋಗಿರುತ್ತದೆ. ಮದ್ಯವ್ಯಸನಿಗಳು ಅಂಡರ್‌ಪಾಸ್ ನಲ್ಲಿ ನಿಂತು ಕುಡಿದು ಅನುಚಿತವಾಗಿ ವರ್ತಿಸುತ್ತಾರೆ. ಇದರಿಂದಾಗಿ ಮಹಿಳೆಯರು ಹಾಗೂ ಮಕ್ಕಳು ಈ ರಸ್ತೆಯಲ್ಲಿ ತಿರುಗಾಡಲು ಆತಂಕಪಡುವಂತಾಗಿದೆ.

ಅಂಡರ್‌ಪಾಸ್‌ನಲ್ಲಿರುವ ಇಷ್ಟೆಲ್ಲ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಸಾರ್ವಜನಿಕರಿಂದ ದೂರುಗಳು ಸಲ್ಲಿಕೆಯಾಗುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಆದ್ದರಿಂದ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಅಂಡರ್‌ಪಾಸ್‌ನಲ್ಲಿನ ಸಮಸ್ಯೆಗಳನ್ನು ಪರಿಹರಿಸಬೇಕು.
-ಜೆ. ಅನುಷ, ಪತ್ರಿಕೋದ್ಯಮ ವಿಭಾಗ, ಮಹಿಳಾ ಸರ್ಕಾರಿ ಕಾಲೇಜು, ಮಂಡ್ಯ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

5 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

6 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

7 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

8 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

9 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

10 hours ago