ಮಂಡ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿಯೇ ಸಾರ್ವಜನಿಕರು ಸುರಕ್ಷಿತವಾಗಿ ರಸ್ತೆ ದಾಟಲಿ ಎಂಬ ಉದ್ದೇಶದಿಂದ ಅಂಡರ್ ಪಾಸನ್ನು ನಿರ್ಮಿಸಲಾಗಿದೆ.
ಈ ಅಂಡರ್ ಪಾಸ್ ನಿರ್ಮಿಸಿ ೨೫ ವರ್ಷಗಳ ಮೇಲಾಗಿದ್ದು, ನಿರ್ವಹಣೆಯ ಕೊರತೆಯಿಂದಾಗಿ ಸಂಪೂರ್ಣ ಹದಗೆಟ್ಟುಹೋಗಿದೆ. ಅಲ್ಲದೆ ಇಲ್ಲಿನ ಅನೈರ್ಮಲ್ಯ ವಾತಾವರಣದಿಂದಾಗಿ ಸಾರ್ವ ಜನಿಕರು ತಿರುಗಾಡಲು ಪರದಾಡುವಂತಾಗಿದೆ. ಈ ಅಂಡರ್ ಪಾಸ್ನಲ್ಲಿ ಸರಿಯಾದ ವಿದ್ಯುತ್ ದೀಪಗಳಿಲ್ಲದೆ ರಾತ್ರಿಯಾದರೆ ಸಾರ್ವಜನಿಕರು ಓಡಾಡಲು ತೊಂದರೆ ಉಂಟಾಗಿದೆ. ಅಲ್ಲದೆ ಮಳೆಗಾಲ ದಲ್ಲಿ ನೀರು ತುಂಬಿಕೊಳ್ಳುತ್ತಿದ್ದು, ಸಾರ್ವ ಜನಿಕರು ನೀರಿನಲ್ಲೇ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.
ಇನ್ನು ಕತ್ತಲಾಗುತ್ತಿದ್ದಂತೆಯೇ ಈ ಅಂಡರ್ಪಾಸ್ ಅನೈತಿಕ ಚಟುವಟಿಕೆಗಳ ತಾಣವಾಗಿ ಹೋಗಿರುತ್ತದೆ. ಮದ್ಯವ್ಯಸನಿಗಳು ಅಂಡರ್ಪಾಸ್ ನಲ್ಲಿ ನಿಂತು ಕುಡಿದು ಅನುಚಿತವಾಗಿ ವರ್ತಿಸುತ್ತಾರೆ. ಇದರಿಂದಾಗಿ ಮಹಿಳೆಯರು ಹಾಗೂ ಮಕ್ಕಳು ಈ ರಸ್ತೆಯಲ್ಲಿ ತಿರುಗಾಡಲು ಆತಂಕಪಡುವಂತಾಗಿದೆ.
ಅಂಡರ್ಪಾಸ್ನಲ್ಲಿರುವ ಇಷ್ಟೆಲ್ಲ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಸಾರ್ವಜನಿಕರಿಂದ ದೂರುಗಳು ಸಲ್ಲಿಕೆಯಾಗುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಆದ್ದರಿಂದ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಅಂಡರ್ಪಾಸ್ನಲ್ಲಿನ ಸಮಸ್ಯೆಗಳನ್ನು ಪರಿಹರಿಸಬೇಕು.
-ಜೆ. ಅನುಷ, ಪತ್ರಿಕೋದ್ಯಮ ವಿಭಾಗ, ಮಹಿಳಾ ಸರ್ಕಾರಿ ಕಾಲೇಜು, ಮಂಡ್ಯ.
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…
ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…
ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…