Mysore
24
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಓದುಗರ ಪತ್ರ: ಜನಸಾಮಾನ್ಯರ ದಸರಾವಾಗಲಿ

ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ಸುಮಾರು 40 ಕೋಟಿ ರೂ.ಅನುದಾನ ಮೀಸಲಿಡುವುದಾಗಿ ತಿಳಿಸಿದೆ.

ಕಳೆದ ವರ್ಷ ರಾಜ್ಯದಲ್ಲಿ ಬರ ಗಾಲದ ಪರಿಸ್ಥಿತಿ ಇದ್ದ ಕಾರಣ ದಸರಾವನ್ನು ಸಾಂಪ್ರ ದಾಯಿಕವಾಗಿ ಆಚರಿಸಲಾಗಿತ್ತು. ಆದರೆ ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸ ಲಾಗಿದೆ.

ಕಳೆದ ಬಾರಿಯ ದಸರಾದಲ್ಲಿ ಕೆಲ ಮಧ್ಯವರ್ತಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕಲಾವಿದರುಗಳಿಂದಲೇ ಕಮಿಷನ್ ಪಡೆದ ಆರೋಪ ಕೇಳಿಬಂದಿತ್ತು. ದಸರಾ ಮುಗಿದು 2 ತಿಂಗಳು ಕಳೆದರೂ ಖರ್ಚುವೆಚ್ಚದ ವರದಿಯನ್ನೇ ನೀಡದ ಪರಿಣಾಮ ದಸರಾ ಮಹೋತ್ಸವ ದಲ್ಲಿ ಹಣ ದುರುಪಯೋಗವಾಗಿರಬಹುದು ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿತ್ತು. ಆದರೆ ಈ ಬಾರಿ ಹಾಗಾಗುವುದು ಬೇಡ. ದಸರಾ ಉಸ್ತುವಾರಿ ವಹಿಸುವವರು ಪ್ರಾಮಾಣಿಕವಾಗಿದ್ದು, ಹಣ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಪ್ರತಿಬಾರಿಯೂ ದಸರಾ ಎಂಬುದು ಜನಪ್ರತಿನಿಧಿಗಳು, ಅವರ ಬೆಂಬಲಿಗರು, ಅಧಿಕಾರಿಗಳ ದಸರಾವಾಗುತ್ತಿದ್ದು, ಈ ಬಾರಿಯಾದರೂ ಜನಸಾಮಾನ್ಯರ ದಸರಾವಾಗುವಂತೆ ನೋಡಿಕೊಳ್ಳಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು,

 

Tags: