ಓದುಗರ ಪತ್ರ

ಓದುಗರ ಪತ್ರ: ಜನಸಾಮಾನ್ಯರ ದಸರಾವಾಗಲಿ

ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ಸುಮಾರು 40 ಕೋಟಿ ರೂ.ಅನುದಾನ ಮೀಸಲಿಡುವುದಾಗಿ ತಿಳಿಸಿದೆ.

ಕಳೆದ ವರ್ಷ ರಾಜ್ಯದಲ್ಲಿ ಬರ ಗಾಲದ ಪರಿಸ್ಥಿತಿ ಇದ್ದ ಕಾರಣ ದಸರಾವನ್ನು ಸಾಂಪ್ರ ದಾಯಿಕವಾಗಿ ಆಚರಿಸಲಾಗಿತ್ತು. ಆದರೆ ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸ ಲಾಗಿದೆ.

ಕಳೆದ ಬಾರಿಯ ದಸರಾದಲ್ಲಿ ಕೆಲ ಮಧ್ಯವರ್ತಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕಲಾವಿದರುಗಳಿಂದಲೇ ಕಮಿಷನ್ ಪಡೆದ ಆರೋಪ ಕೇಳಿಬಂದಿತ್ತು. ದಸರಾ ಮುಗಿದು 2 ತಿಂಗಳು ಕಳೆದರೂ ಖರ್ಚುವೆಚ್ಚದ ವರದಿಯನ್ನೇ ನೀಡದ ಪರಿಣಾಮ ದಸರಾ ಮಹೋತ್ಸವ ದಲ್ಲಿ ಹಣ ದುರುಪಯೋಗವಾಗಿರಬಹುದು ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿತ್ತು. ಆದರೆ ಈ ಬಾರಿ ಹಾಗಾಗುವುದು ಬೇಡ. ದಸರಾ ಉಸ್ತುವಾರಿ ವಹಿಸುವವರು ಪ್ರಾಮಾಣಿಕವಾಗಿದ್ದು, ಹಣ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಪ್ರತಿಬಾರಿಯೂ ದಸರಾ ಎಂಬುದು ಜನಪ್ರತಿನಿಧಿಗಳು, ಅವರ ಬೆಂಬಲಿಗರು, ಅಧಿಕಾರಿಗಳ ದಸರಾವಾಗುತ್ತಿದ್ದು, ಈ ಬಾರಿಯಾದರೂ ಜನಸಾಮಾನ್ಯರ ದಸರಾವಾಗುವಂತೆ ನೋಡಿಕೊಳ್ಳಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು,

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

2 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

2 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

3 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

3 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

3 hours ago

ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ: ನಟ ರವಿಚಂದ್ರನ್‌ ವಿಶ್ವಾಸ

ಬೆಂಗಳೂರು: ನಿಮಗೆಲ್ಲಾ ಡಿಬಾಸ್‌, ಆ ಡಿಬಾಸ್‌ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ ಎಂದು ನಟ ರವಿಚಂದ್ರನ್‌…

3 hours ago