ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ಸುಮಾರು 40 ಕೋಟಿ ರೂ.ಅನುದಾನ ಮೀಸಲಿಡುವುದಾಗಿ ತಿಳಿಸಿದೆ.
ಕಳೆದ ವರ್ಷ ರಾಜ್ಯದಲ್ಲಿ ಬರ ಗಾಲದ ಪರಿಸ್ಥಿತಿ ಇದ್ದ ಕಾರಣ ದಸರಾವನ್ನು ಸಾಂಪ್ರ ದಾಯಿಕವಾಗಿ ಆಚರಿಸಲಾಗಿತ್ತು. ಆದರೆ ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸ ಲಾಗಿದೆ.
ಕಳೆದ ಬಾರಿಯ ದಸರಾದಲ್ಲಿ ಕೆಲ ಮಧ್ಯವರ್ತಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕಲಾವಿದರುಗಳಿಂದಲೇ ಕಮಿಷನ್ ಪಡೆದ ಆರೋಪ ಕೇಳಿಬಂದಿತ್ತು. ದಸರಾ ಮುಗಿದು 2 ತಿಂಗಳು ಕಳೆದರೂ ಖರ್ಚುವೆಚ್ಚದ ವರದಿಯನ್ನೇ ನೀಡದ ಪರಿಣಾಮ ದಸರಾ ಮಹೋತ್ಸವ ದಲ್ಲಿ ಹಣ ದುರುಪಯೋಗವಾಗಿರಬಹುದು ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿತ್ತು. ಆದರೆ ಈ ಬಾರಿ ಹಾಗಾಗುವುದು ಬೇಡ. ದಸರಾ ಉಸ್ತುವಾರಿ ವಹಿಸುವವರು ಪ್ರಾಮಾಣಿಕವಾಗಿದ್ದು, ಹಣ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಪ್ರತಿಬಾರಿಯೂ ದಸರಾ ಎಂಬುದು ಜನಪ್ರತಿನಿಧಿಗಳು, ಅವರ ಬೆಂಬಲಿಗರು, ಅಧಿಕಾರಿಗಳ ದಸರಾವಾಗುತ್ತಿದ್ದು, ಈ ಬಾರಿಯಾದರೂ ಜನಸಾಮಾನ್ಯರ ದಸರಾವಾಗುವಂತೆ ನೋಡಿಕೊಳ್ಳಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು,
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…