ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ಸುಮಾರು 40 ಕೋಟಿ ರೂ.ಅನುದಾನ ಮೀಸಲಿಡುವುದಾಗಿ ತಿಳಿಸಿದೆ.
ಕಳೆದ ವರ್ಷ ರಾಜ್ಯದಲ್ಲಿ ಬರ ಗಾಲದ ಪರಿಸ್ಥಿತಿ ಇದ್ದ ಕಾರಣ ದಸರಾವನ್ನು ಸಾಂಪ್ರ ದಾಯಿಕವಾಗಿ ಆಚರಿಸಲಾಗಿತ್ತು. ಆದರೆ ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸ ಲಾಗಿದೆ.
ಕಳೆದ ಬಾರಿಯ ದಸರಾದಲ್ಲಿ ಕೆಲ ಮಧ್ಯವರ್ತಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕಲಾವಿದರುಗಳಿಂದಲೇ ಕಮಿಷನ್ ಪಡೆದ ಆರೋಪ ಕೇಳಿಬಂದಿತ್ತು. ದಸರಾ ಮುಗಿದು 2 ತಿಂಗಳು ಕಳೆದರೂ ಖರ್ಚುವೆಚ್ಚದ ವರದಿಯನ್ನೇ ನೀಡದ ಪರಿಣಾಮ ದಸರಾ ಮಹೋತ್ಸವ ದಲ್ಲಿ ಹಣ ದುರುಪಯೋಗವಾಗಿರಬಹುದು ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿತ್ತು. ಆದರೆ ಈ ಬಾರಿ ಹಾಗಾಗುವುದು ಬೇಡ. ದಸರಾ ಉಸ್ತುವಾರಿ ವಹಿಸುವವರು ಪ್ರಾಮಾಣಿಕವಾಗಿದ್ದು, ಹಣ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಪ್ರತಿಬಾರಿಯೂ ದಸರಾ ಎಂಬುದು ಜನಪ್ರತಿನಿಧಿಗಳು, ಅವರ ಬೆಂಬಲಿಗರು, ಅಧಿಕಾರಿಗಳ ದಸರಾವಾಗುತ್ತಿದ್ದು, ಈ ಬಾರಿಯಾದರೂ ಜನಸಾಮಾನ್ಯರ ದಸರಾವಾಗುವಂತೆ ನೋಡಿಕೊಳ್ಳಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು,
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…