ಓದುಗರ ಪತ್ರ

ಓದುಗರ ಪತ್ರ: ಜನಸಾಮಾನ್ಯರ ದಸರಾವಾಗಲಿ

ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ಸುಮಾರು 40 ಕೋಟಿ ರೂ.ಅನುದಾನ ಮೀಸಲಿಡುವುದಾಗಿ ತಿಳಿಸಿದೆ.

ಕಳೆದ ವರ್ಷ ರಾಜ್ಯದಲ್ಲಿ ಬರ ಗಾಲದ ಪರಿಸ್ಥಿತಿ ಇದ್ದ ಕಾರಣ ದಸರಾವನ್ನು ಸಾಂಪ್ರ ದಾಯಿಕವಾಗಿ ಆಚರಿಸಲಾಗಿತ್ತು. ಆದರೆ ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸ ಲಾಗಿದೆ.

ಕಳೆದ ಬಾರಿಯ ದಸರಾದಲ್ಲಿ ಕೆಲ ಮಧ್ಯವರ್ತಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕಲಾವಿದರುಗಳಿಂದಲೇ ಕಮಿಷನ್ ಪಡೆದ ಆರೋಪ ಕೇಳಿಬಂದಿತ್ತು. ದಸರಾ ಮುಗಿದು 2 ತಿಂಗಳು ಕಳೆದರೂ ಖರ್ಚುವೆಚ್ಚದ ವರದಿಯನ್ನೇ ನೀಡದ ಪರಿಣಾಮ ದಸರಾ ಮಹೋತ್ಸವ ದಲ್ಲಿ ಹಣ ದುರುಪಯೋಗವಾಗಿರಬಹುದು ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿತ್ತು. ಆದರೆ ಈ ಬಾರಿ ಹಾಗಾಗುವುದು ಬೇಡ. ದಸರಾ ಉಸ್ತುವಾರಿ ವಹಿಸುವವರು ಪ್ರಾಮಾಣಿಕವಾಗಿದ್ದು, ಹಣ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಪ್ರತಿಬಾರಿಯೂ ದಸರಾ ಎಂಬುದು ಜನಪ್ರತಿನಿಧಿಗಳು, ಅವರ ಬೆಂಬಲಿಗರು, ಅಧಿಕಾರಿಗಳ ದಸರಾವಾಗುತ್ತಿದ್ದು, ಈ ಬಾರಿಯಾದರೂ ಜನಸಾಮಾನ್ಯರ ದಸರಾವಾಗುವಂತೆ ನೋಡಿಕೊಳ್ಳಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು,

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago