ಓದುಗರ ಪತ್ರ

ಓದುಗರ ಪತ್ರ : ಜವರೇಗೌಡ ಪಾರ್ಕ್ ಅಭಿವೃದ್ದಿಯಾಗಲಿ

ಮೈಸೂರಿನ ಸರಸ್ವತಿಪುರಂನಲ್ಲಿರುವ ಕೆ. ಜವರೇಗೌಡ ಪಾರ್ಕ್ ಐದು ವರ್ಷಗಳ ಹಿಂದೆ ಮೈಸೂರಿನಲ್ಲಿಯೇ ಅತ್ಯಂತ ಸುಂದರ ಪಾರ್ಕ್ ಗಳಲ್ಲಿ ಒಂದಾಗಿತ್ತು. ನಿತ್ಯ ನೂರಾರು ಮಂದಿ ಪಾರ್ಕ್‌ಗೆ ಭೇಟಿ ನೀಡುತ್ತಿದ್ದರು.

ಆದರೆ, ಇತ್ತೀಚಿನ ದಿನಗಳಲ್ಲಿ ಪಾರ್ಕ್‌ಅನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಸಂಪೂರ್ಣ ಹದಗೆಟ್ಟು ಹೋಗಿದ್ದು, ಕಸ-ಕಡ್ಡಿಗಳಿಂದ ತುಂಬಿಹೋಗಿದೆ. ಅಲ್ಲದೆ ಕುಳಿತುಕೊಳ್ಳಲು ಅಳವಡಿಸಿದ್ದ ಆಸನಗಳೂ ಮುರಿದು ಬಿದ್ದಿವೆ.

ಪಾರ್ಕ್ ಅಭಿವೃದ್ಧಿಯಾಗಿಲ್ಲ ಎಂಬುದು ಒಂದೆಡೆಯಾದರೆ ಕಳೆದ ೨ ವರ್ಷಗಳಿಂದಲೂ ಇಲ್ಲಿನ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಜಡಿಯಲಾಗಿದೆ. ಇದ ರಿಂದಾಗಿ ಪಾರ್ಕ್‌ಗೆ ಬರುವ ಸಾರ್ವಜನಿಕರಿಗೆ ಶೌಚಾಲಯ ಅಲಭ್ಯ ವಾಗಿದ್ದು, ಬಯಲಿನಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಪಾಕ್ ನಲ್ಲಿ ಇಷ್ಟೆಲ್ಲ ಅವ್ಯವಸ್ಥೆಗಳಿದ್ದರೂ ಸಂಬಂಧಪಟ್ಟವರು ಪಾರ್ಕ್ ಅನ್ನು ಅಭಿವೃದ್ಧಿಪಡಿಸಲು ಮುಂದಾಗಿಲ್ಲ. ಇದರಿಂದಾಗಿ ಪಾರ್ಕ್ ಸಾರ್ವಜನಿಕ ಉಪಯೋಗದಿಂದ ದೂರಾಗಿದ್ದು, ಮೈಸೂರು ಮಹಾನಗರ ಪಾಲಿಕೆಯ ವರು ಕೂಡಲೇ ಈ ಪಾರ್ಕ್‌ಅನ್ನು ಅಭಿವೃದ್ಧಿಪಡಿಸುವ ಜತೆಗೆ, ಶೌಚಾಲಯ ವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಒದಗಿಸಬೇಕಿದೆ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

4 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

5 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

6 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

6 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

6 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

7 hours ago