ಮೈಸೂರಿನ ಸರಸ್ವತಿಪುರಂನಲ್ಲಿರುವ ಕೆ. ಜವರೇಗೌಡ ಪಾರ್ಕ್ ಐದು ವರ್ಷಗಳ ಹಿಂದೆ ಮೈಸೂರಿನಲ್ಲಿಯೇ ಅತ್ಯಂತ ಸುಂದರ ಪಾರ್ಕ್ ಗಳಲ್ಲಿ ಒಂದಾಗಿತ್ತು. ನಿತ್ಯ ನೂರಾರು ಮಂದಿ ಪಾರ್ಕ್ಗೆ ಭೇಟಿ ನೀಡುತ್ತಿದ್ದರು.
ಆದರೆ, ಇತ್ತೀಚಿನ ದಿನಗಳಲ್ಲಿ ಪಾರ್ಕ್ಅನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಸಂಪೂರ್ಣ ಹದಗೆಟ್ಟು ಹೋಗಿದ್ದು, ಕಸ-ಕಡ್ಡಿಗಳಿಂದ ತುಂಬಿಹೋಗಿದೆ. ಅಲ್ಲದೆ ಕುಳಿತುಕೊಳ್ಳಲು ಅಳವಡಿಸಿದ್ದ ಆಸನಗಳೂ ಮುರಿದು ಬಿದ್ದಿವೆ.
ಪಾರ್ಕ್ ಅಭಿವೃದ್ಧಿಯಾಗಿಲ್ಲ ಎಂಬುದು ಒಂದೆಡೆಯಾದರೆ ಕಳೆದ ೨ ವರ್ಷಗಳಿಂದಲೂ ಇಲ್ಲಿನ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಜಡಿಯಲಾಗಿದೆ. ಇದ ರಿಂದಾಗಿ ಪಾರ್ಕ್ಗೆ ಬರುವ ಸಾರ್ವಜನಿಕರಿಗೆ ಶೌಚಾಲಯ ಅಲಭ್ಯ ವಾಗಿದ್ದು, ಬಯಲಿನಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಪಾಕ್ ನಲ್ಲಿ ಇಷ್ಟೆಲ್ಲ ಅವ್ಯವಸ್ಥೆಗಳಿದ್ದರೂ ಸಂಬಂಧಪಟ್ಟವರು ಪಾರ್ಕ್ ಅನ್ನು ಅಭಿವೃದ್ಧಿಪಡಿಸಲು ಮುಂದಾಗಿಲ್ಲ. ಇದರಿಂದಾಗಿ ಪಾರ್ಕ್ ಸಾರ್ವಜನಿಕ ಉಪಯೋಗದಿಂದ ದೂರಾಗಿದ್ದು, ಮೈಸೂರು ಮಹಾನಗರ ಪಾಲಿಕೆಯ ವರು ಕೂಡಲೇ ಈ ಪಾರ್ಕ್ಅನ್ನು ಅಭಿವೃದ್ಧಿಪಡಿಸುವ ಜತೆಗೆ, ಶೌಚಾಲಯ ವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಒದಗಿಸಬೇಕಿದೆ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…