ಓದುಗರ ಪತ್ರ

ಓದುಗರ ಪತ್ರ : ಜವರೇಗೌಡ ಪಾರ್ಕ್ ಅಭಿವೃದ್ದಿಯಾಗಲಿ

ಮೈಸೂರಿನ ಸರಸ್ವತಿಪುರಂನಲ್ಲಿರುವ ಕೆ. ಜವರೇಗೌಡ ಪಾರ್ಕ್ ಐದು ವರ್ಷಗಳ ಹಿಂದೆ ಮೈಸೂರಿನಲ್ಲಿಯೇ ಅತ್ಯಂತ ಸುಂದರ ಪಾರ್ಕ್ ಗಳಲ್ಲಿ ಒಂದಾಗಿತ್ತು. ನಿತ್ಯ ನೂರಾರು ಮಂದಿ ಪಾರ್ಕ್‌ಗೆ ಭೇಟಿ ನೀಡುತ್ತಿದ್ದರು.

ಆದರೆ, ಇತ್ತೀಚಿನ ದಿನಗಳಲ್ಲಿ ಪಾರ್ಕ್‌ಅನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಸಂಪೂರ್ಣ ಹದಗೆಟ್ಟು ಹೋಗಿದ್ದು, ಕಸ-ಕಡ್ಡಿಗಳಿಂದ ತುಂಬಿಹೋಗಿದೆ. ಅಲ್ಲದೆ ಕುಳಿತುಕೊಳ್ಳಲು ಅಳವಡಿಸಿದ್ದ ಆಸನಗಳೂ ಮುರಿದು ಬಿದ್ದಿವೆ.

ಪಾರ್ಕ್ ಅಭಿವೃದ್ಧಿಯಾಗಿಲ್ಲ ಎಂಬುದು ಒಂದೆಡೆಯಾದರೆ ಕಳೆದ ೨ ವರ್ಷಗಳಿಂದಲೂ ಇಲ್ಲಿನ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಜಡಿಯಲಾಗಿದೆ. ಇದ ರಿಂದಾಗಿ ಪಾರ್ಕ್‌ಗೆ ಬರುವ ಸಾರ್ವಜನಿಕರಿಗೆ ಶೌಚಾಲಯ ಅಲಭ್ಯ ವಾಗಿದ್ದು, ಬಯಲಿನಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಪಾಕ್ ನಲ್ಲಿ ಇಷ್ಟೆಲ್ಲ ಅವ್ಯವಸ್ಥೆಗಳಿದ್ದರೂ ಸಂಬಂಧಪಟ್ಟವರು ಪಾರ್ಕ್ ಅನ್ನು ಅಭಿವೃದ್ಧಿಪಡಿಸಲು ಮುಂದಾಗಿಲ್ಲ. ಇದರಿಂದಾಗಿ ಪಾರ್ಕ್ ಸಾರ್ವಜನಿಕ ಉಪಯೋಗದಿಂದ ದೂರಾಗಿದ್ದು, ಮೈಸೂರು ಮಹಾನಗರ ಪಾಲಿಕೆಯ ವರು ಕೂಡಲೇ ಈ ಪಾರ್ಕ್‌ಅನ್ನು ಅಭಿವೃದ್ಧಿಪಡಿಸುವ ಜತೆಗೆ, ಶೌಚಾಲಯ ವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಒದಗಿಸಬೇಕಿದೆ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

1 hour ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

2 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

3 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

3 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

5 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

6 hours ago