ಓದುಗರ ಪತ್ರ

ಓದುಗರ ಪತ್ರ | ಶಾಸಕರ ನಡೆ ಆದರ್ಶಪ್ರಾಯವಾಗಿರಲಿ

ಉತ್ತರ ಪ್ರದೇಶ ವಿಧಾನಸಭೆಯ ಮುಖ್ಯ ಸಭಾಂಗಣದ ಪ್ರವೇಶದ್ವಾರದ ಕಾರ್ಪೆಟ್ ಮೇಲೆ ಶಾಸಕರೊಬ್ಬರು ಪಾನ್ ಮಸಾಲ ಉಗುಳಿದ್ದಕ್ಕೆ ಸಭಾಧ್ಯಕ್ಷ ಸತೀಶ್ ಮಹಾನಾ ಆಕ್ಷೇಪ ವ್ಯಕ್ತಪಡಿಸಿ, ಸದನದ ಘನತೆಯನ್ನು ಪ್ರತಿಯೊಬ್ಬ ಸದಸ್ಯರೂ ಕಾಪಾಡಿಕೊಳ್ಳಬೇಕೆಂದು ಶಿಸ್ತಿನ ಪಾಠ ಬೋಽಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

‘ವಿಧಾನಸಭೆಯ ಸಭಾಂಗಣದ ಮುಂದೆ ಪಾನ್ ಮಸಲಾ ಉಗಿದ ಸದಸ್ಯ ಯಾರೆಂದು ನನಗೆ ತಿಳಿದಿದೆ. ಆ ವಿಡಿಯೋ ಕೂಡ ಲಭ್ಯವಿದೆ. ಆದರೆ ನಾನು ಯಾರನ್ನೂ ಅವಮಾನಿಸುವ ಉದ್ದೇಶ ಹೊಂದಿಲ್ಲವಾದ್ದರಿಂದ ಸಾರ್ವಜನಿಕವಾಗಿ ಅವರ ಹೆಸರು ಹೇಳಲು ಬಯಸುವುದಿಲ್ಲ. ಹಾಗೆ ಮಾಡಿದ ಸದಸ್ಯರು ನನ್ನನ್ನು ಭೇಟಿಯಾಗಬೇಕು, ಇಲ್ಲದಿದ್ದರೆ ನಾನು ಅವರನ್ನು ಕರೆಸುವಂತೆ ಒತ್ತಾಯಿಸಲಾಗುತ್ತದೆ’ ಎಂಬ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರಾದವರು ಜವಾಬ್ದಾರಿಯುತವಾಗಿ ವರ್ತಿಸಬೇಕು.

ತಮ್ಮ ಕ್ಷೇತ್ರದ ಸ್ವಚ್ಛತೆ ಕಾಪಾಡಿಕೊಳ್ಳಬೇಕಾದ ಅವರೇ ಪವಿತ್ರವಾದ ವಿಧಾನಸೌದದ ಮುಂದೆ ಪಾನ್ ಮಸಾಲವನ್ನು ಜಗಿದು ಎಲ್ಲೆಂದರಲ್ಲಿ ಉಗಿಯುವುದು ಅವರಿಗೆ ಶೋಭೆ ತರುವುದಿಲ್ಲ. ಇದಿಷ್ಟೇ ಅಲ್ಲದೆ, ಕೆಲ ಸದಸ್ಯರು ಸದನದಲ್ಲಿಯೇ ಕೈ ಕೈ ಮಿಲಾಯಿಸುವುದು, ಬಟ್ಟೆ ಹರಿದುಕೊಂಡು ರಂಪಾಟ ಮಾಡುವುದು, ಗಲಾಟೆಗಳನ್ನು ನಿಯಂತ್ರಿಸಲು ಬರುವ ಮಾರ್ಷಲ್‌ಗಳ ಮೇಲೆಯೇ ಕೈ ಎತ್ತುವುದು, ಸದನದಲ್ಲಿ ಹಾಳೆಗಳನ್ನು ಹರಿದು ಬಿಸಾಡುವುದು, ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸುವುದು, ಇಷ್ಟು ಸಾಲದೆಂಬಂತೆ ಗಹನ ಚರ್ಚೆಗಳು ಸದನದಲ್ಲಿ ನಡೆಯುತ್ತಿರುವ ಸಮಯದಲ್ಲಿಯೇ ನಿದ್ದೆಗೆ ಜಾರಿ ಬಿಡುವುದು. . . ಈ ರೀತಿಯ ಶಾಸಕರ ಹಲವು ಬೇಜವ್ದಾರಿಯ ನಡವಳಿಕೆಗಳು ಸುದ್ದಿಯಾಗುತ್ತಿವೆ. ಜನರು ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ ಎಂದು ನಂಬಿ ಅವರನ್ನು ಆರಿಸಿ ಆ ಸ್ಥಾನದಲ್ಲಿ ಕೂರಿಸಿದ್ದಾರೆ. ಇದನ್ನು ಅರಿತು ಎಲ್ಲ ಶಾಸಕರು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿಭಾಯಿಸುವಂತಾಗಲಿ. -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ತಮಿಳುನಾಡು ಸಿಎಂ ವಿಜಯ್‌ಗೆ ಕರೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್‌ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ…

23 mins ago

ಮೇ.13 ರಿಂದ 3 ದಿನಗಳ ಕಾಲ ಟ್ರಂಪ್‌ ಚೀನಾ ಪ್ರವಾಸ

ವಾಷಿಂಗ್ಟನ್:‌ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ.13ರಿಂದ 15ರವರೆಗೆ ಚೀನಾಗೆ…

54 mins ago

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

2 hours ago

ಚಿನ್ನ ಖರೀದಿ ನಿಲ್ಸಿ ; ಇಂಧನ ಕಡಿಮೆ ಬಳಸಿ : ಬೆಲೆ ಏರಿಕೆ ಮುನ್ಸೂಚನೆ ಕೊಟ್ರಾ ಪ್ರಧಾನಿ ಮೋದಿ?

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…

3 hours ago

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

4 hours ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

4 hours ago