ಓದುಗರ ಪತ್ರ

ಓದುಗರ ಪತ್ರ | ಶಾಸಕರ ನಡೆ ಆದರ್ಶಪ್ರಾಯವಾಗಿರಲಿ

ಉತ್ತರ ಪ್ರದೇಶ ವಿಧಾನಸಭೆಯ ಮುಖ್ಯ ಸಭಾಂಗಣದ ಪ್ರವೇಶದ್ವಾರದ ಕಾರ್ಪೆಟ್ ಮೇಲೆ ಶಾಸಕರೊಬ್ಬರು ಪಾನ್ ಮಸಾಲ ಉಗುಳಿದ್ದಕ್ಕೆ ಸಭಾಧ್ಯಕ್ಷ ಸತೀಶ್ ಮಹಾನಾ ಆಕ್ಷೇಪ ವ್ಯಕ್ತಪಡಿಸಿ, ಸದನದ ಘನತೆಯನ್ನು ಪ್ರತಿಯೊಬ್ಬ ಸದಸ್ಯರೂ ಕಾಪಾಡಿಕೊಳ್ಳಬೇಕೆಂದು ಶಿಸ್ತಿನ ಪಾಠ ಬೋಽಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

‘ವಿಧಾನಸಭೆಯ ಸಭಾಂಗಣದ ಮುಂದೆ ಪಾನ್ ಮಸಲಾ ಉಗಿದ ಸದಸ್ಯ ಯಾರೆಂದು ನನಗೆ ತಿಳಿದಿದೆ. ಆ ವಿಡಿಯೋ ಕೂಡ ಲಭ್ಯವಿದೆ. ಆದರೆ ನಾನು ಯಾರನ್ನೂ ಅವಮಾನಿಸುವ ಉದ್ದೇಶ ಹೊಂದಿಲ್ಲವಾದ್ದರಿಂದ ಸಾರ್ವಜನಿಕವಾಗಿ ಅವರ ಹೆಸರು ಹೇಳಲು ಬಯಸುವುದಿಲ್ಲ. ಹಾಗೆ ಮಾಡಿದ ಸದಸ್ಯರು ನನ್ನನ್ನು ಭೇಟಿಯಾಗಬೇಕು, ಇಲ್ಲದಿದ್ದರೆ ನಾನು ಅವರನ್ನು ಕರೆಸುವಂತೆ ಒತ್ತಾಯಿಸಲಾಗುತ್ತದೆ’ ಎಂಬ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರಾದವರು ಜವಾಬ್ದಾರಿಯುತವಾಗಿ ವರ್ತಿಸಬೇಕು.

ತಮ್ಮ ಕ್ಷೇತ್ರದ ಸ್ವಚ್ಛತೆ ಕಾಪಾಡಿಕೊಳ್ಳಬೇಕಾದ ಅವರೇ ಪವಿತ್ರವಾದ ವಿಧಾನಸೌದದ ಮುಂದೆ ಪಾನ್ ಮಸಾಲವನ್ನು ಜಗಿದು ಎಲ್ಲೆಂದರಲ್ಲಿ ಉಗಿಯುವುದು ಅವರಿಗೆ ಶೋಭೆ ತರುವುದಿಲ್ಲ. ಇದಿಷ್ಟೇ ಅಲ್ಲದೆ, ಕೆಲ ಸದಸ್ಯರು ಸದನದಲ್ಲಿಯೇ ಕೈ ಕೈ ಮಿಲಾಯಿಸುವುದು, ಬಟ್ಟೆ ಹರಿದುಕೊಂಡು ರಂಪಾಟ ಮಾಡುವುದು, ಗಲಾಟೆಗಳನ್ನು ನಿಯಂತ್ರಿಸಲು ಬರುವ ಮಾರ್ಷಲ್‌ಗಳ ಮೇಲೆಯೇ ಕೈ ಎತ್ತುವುದು, ಸದನದಲ್ಲಿ ಹಾಳೆಗಳನ್ನು ಹರಿದು ಬಿಸಾಡುವುದು, ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸುವುದು, ಇಷ್ಟು ಸಾಲದೆಂಬಂತೆ ಗಹನ ಚರ್ಚೆಗಳು ಸದನದಲ್ಲಿ ನಡೆಯುತ್ತಿರುವ ಸಮಯದಲ್ಲಿಯೇ ನಿದ್ದೆಗೆ ಜಾರಿ ಬಿಡುವುದು. . . ಈ ರೀತಿಯ ಶಾಸಕರ ಹಲವು ಬೇಜವ್ದಾರಿಯ ನಡವಳಿಕೆಗಳು ಸುದ್ದಿಯಾಗುತ್ತಿವೆ. ಜನರು ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ ಎಂದು ನಂಬಿ ಅವರನ್ನು ಆರಿಸಿ ಆ ಸ್ಥಾನದಲ್ಲಿ ಕೂರಿಸಿದ್ದಾರೆ. ಇದನ್ನು ಅರಿತು ಎಲ್ಲ ಶಾಸಕರು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿಭಾಯಿಸುವಂತಾಗಲಿ. -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

7 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

7 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

7 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

7 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

7 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

8 hours ago