ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ ಘಟನೆ ರಾಜ್ಯ ವಿಧಾನ ಸಭೆಯಲ್ಲಿ ಮಾ.16ರಂದು ನಡೆದಿದೆ. ಮುಖ್ಯಮಂತ್ರಿ ಹಾಗೂ ಇತರ ಹಿರಿಯ ಸಚಿವರು ಮನವೊಲಿಸಿದ ನಂತರ ಅವರು ತಮ್ಮ ಪೀಠಕ್ಕೆ ಪುನಃ ಮರಳಿದ್ದಾರೆ.
ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ ಕೇವಲ 84 ಪ್ರಶ್ನೆಗಳಿಗೆ ಮಾತ್ರ ಸಂಬಂಧಪಟ್ಟ ಸಚಿವರು ಉತ್ತರ ನೀಡಿದ್ದರು. ಇದರ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ಪಕ್ಷಗಳು ಸದನದಲ್ಲಿ ಪ್ರತಿಭಟನೆ ನಡೆಸಿದ್ದವು. ವಿಧಾನ ಮಂಡಲದ ಕಲಾಪಗಳಲ್ಲಿ ಪ್ರಶೋತ್ತರ ಸಮಯ ಪ್ರಮುಖವಾಗಿದೆ. ಸದಸ್ಯರು ತಮ್ಮ ತಮ್ಮ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಕುಂದು ಕೊರತೆಗಳು ಕುರಿತಂತೆ, ಸಂಬಂಧಪಟ್ಟ ಸಚಿವರಿಂದ ಉತ್ತರ ಬಯಸುವುದು ಸಾಮಾನ್ಯ ಪ್ರಜಾಸತ್ತಾತಕ ಪ್ರಕ್ರಿಯೆಯಾಗಿದೆ. ಆದರೆ ಅನೇಕ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸದೇ ಉತ್ತರಗಳನ್ನು ಸಕಾಲದಲ್ಲಿ ನೀಡುವುದಿಲ್ಲ. ಕೆಲವು ಸಂದರ್ಭಗಳಲ್ಲಿ ಸಂಬಂಧಪಟ್ಟ ಸಚಿವರೇ ಸದನದಲ್ಲಿ ಹಾಜರಿರುವುದಿಲ್ಲ. ಇದರಿಂದ ಪ್ರಶ್ನೆಗಳನ್ನು ಕೇಳುವ ಸದಸ್ಯರ ಉತ್ಸಾಹಕ್ಕೆ ತಣ್ಣೀರೆರಚಿದಂತಾಗುತ್ತದೆ. ಜೊತೆಗೆ ಸರ್ಕಾರಕ್ಕೂ ಮುಜುಗರ ಉಂಟಾಗುತ್ತದೆ.
ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಅತಿ ಹೆಚ್ಚು ಪ್ರಶ್ನೆಗಳಿಗೆ ಉತ್ತರ ಬಾಕಿ ಉಳಿಸಿಕೊಂಡಿರುವ ಇಲಾಖೆಯ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತ್ತುಗೊಳಿಸುವಂತೆ ಸೂಚನೆ ನೀಡಿರುವುದು ಸ್ವಾಗತಾರ್ಹವಾಗಿದೆ. ಇನ್ನು ಮುಂದಾದರೂ ಸ್ಪೀಕರ್ರವರು ಸಭಾ ತ್ಯಾಗ ಮಾಡುವಂತಹ ಪರಿಸ್ಥಿತಿ ಬಾರದಿರಲಿ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…
ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…
ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…