ಓದುಗರ ಪತ್ರ

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ ಘಟನೆ ರಾಜ್ಯ ವಿಧಾನ ಸಭೆಯಲ್ಲಿ ಮಾ.16ರಂದು ನಡೆದಿದೆ. ಮುಖ್ಯಮಂತ್ರಿ ಹಾಗೂ ಇತರ ಹಿರಿಯ ಸಚಿವರು ಮನವೊಲಿಸಿದ ನಂತರ ಅವರು ತಮ್ಮ ಪೀಠಕ್ಕೆ ಪುನಃ ಮರಳಿದ್ದಾರೆ.

ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ ಕೇವಲ 84 ಪ್ರಶ್ನೆಗಳಿಗೆ ಮಾತ್ರ ಸಂಬಂಧಪಟ್ಟ ಸಚಿವರು ಉತ್ತರ ನೀಡಿದ್ದರು. ಇದರ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ಪಕ್ಷಗಳು ಸದನದಲ್ಲಿ ಪ್ರತಿಭಟನೆ ನಡೆಸಿದ್ದವು. ವಿಧಾನ ಮಂಡಲದ ಕಲಾಪಗಳಲ್ಲಿ ಪ್ರಶೋತ್ತರ ಸಮಯ ಪ್ರಮುಖವಾಗಿದೆ. ಸದಸ್ಯರು ತಮ್ಮ ತಮ್ಮ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಕುಂದು ಕೊರತೆಗಳು ಕುರಿತಂತೆ, ಸಂಬಂಧಪಟ್ಟ ಸಚಿವರಿಂದ ಉತ್ತರ ಬಯಸುವುದು ಸಾಮಾನ್ಯ ಪ್ರಜಾಸತ್ತಾತಕ ಪ್ರಕ್ರಿಯೆಯಾಗಿದೆ. ಆದರೆ ಅನೇಕ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸದೇ ಉತ್ತರಗಳನ್ನು ಸಕಾಲದಲ್ಲಿ ನೀಡುವುದಿಲ್ಲ. ಕೆಲವು ಸಂದರ್ಭಗಳಲ್ಲಿ ಸಂಬಂಧಪಟ್ಟ ಸಚಿವರೇ ಸದನದಲ್ಲಿ ಹಾಜರಿರುವುದಿಲ್ಲ. ಇದರಿಂದ ಪ್ರಶ್ನೆಗಳನ್ನು ಕೇಳುವ ಸದಸ್ಯರ ಉತ್ಸಾಹಕ್ಕೆ ತಣ್ಣೀರೆರಚಿದಂತಾಗುತ್ತದೆ. ಜೊತೆಗೆ ಸರ್ಕಾರಕ್ಕೂ ಮುಜುಗರ ಉಂಟಾಗುತ್ತದೆ.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಅತಿ ಹೆಚ್ಚು ಪ್ರಶ್ನೆಗಳಿಗೆ ಉತ್ತರ ಬಾಕಿ ಉಳಿಸಿಕೊಂಡಿರುವ ಇಲಾಖೆಯ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತ್ತುಗೊಳಿಸುವಂತೆ ಸೂಚನೆ ನೀಡಿರುವುದು ಸ್ವಾಗತಾರ್ಹವಾಗಿದೆ. ಇನ್ನು ಮುಂದಾದರೂ ಸ್ಪೀಕರ್‌ರವರು ಸಭಾ ತ್ಯಾಗ ಮಾಡುವಂತಹ ಪರಿಸ್ಥಿತಿ ಬಾರದಿರಲಿ.

– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago