ಓದುಗರ ಪತ್ರ

ಓದುಗರ ಪತ್ರ| ಮನೆ ಕಳೆದುಕೊಂಡವರಿಗೆ ಶೀಘ್ರ ಪರಿಹಾರ ಸಿಗಲಿ

ರಾಜ್ಯದಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅನೇಕ ಕಡೆಗಳಲ್ಲಿ ಮನೆಗಳು ಕುಸಿದು ಬಿದ್ದು, ಆಸ್ತಿ-ಪಾಸ್ತಿ, ಜೀವ ಹಾನಿಗಳಾಗಿವೆ.

ಭಾರೀ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಅನೇಕ ಗ್ರಾಮಗಳು ಜಲಾವೃತಗೊಂಡಿವೆ.ಅಪಾರ ಪ್ರಮಾಣದ ಫಸಲು ನೀರುಪಾಲಾಗಿದ್ದು, ಮನೆಗಳು ಕುಸಿದು ಬಿದ್ದಿವೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಕಾರದಿಂದ ಬೆಳೆ ಹಾನಿ ಹಾಗೂ ಕುಸಿದುಬಿದ್ದ ಮನೆಗಳ ಮರುನಿರ್ಮಾಣಕ್ಕಾಗಿ ಪರಿಹಾರ ಧನವನ್ನು ಕೊಡಲಾಗುತ್ತಿದೆ. ಆದರೆ ಈ ಪರಿಹಾರದ ಮೊತ್ತ ಫಲಾನುಭವಿಗಳ ಕೈ ಸೇರುವಷ್ಟರಲ್ಲಿ ವರ್ಷವೇ ಆಗುತ್ತಿದ್ದು, ಅಲ್ಲಿಯವರೆಗೂ ಮುರಿದುಬಿದ್ದ ಮನೆಗಳಲ್ಲಿಯೇ ವಾಸಿಸಬೇಕಾಗಿದೆ. ಈ ಪರಿಹಾರದ ಮೊತ್ತವೂ ಹಂತ ಹಂತವಾಗಿ ಕಂತುಗಳ ರೂಪದಲ್ಲಿ ಫಲಾನುಭವಿಗಳ ಕೈ ಸೇರುವುದರಿಂದ ಮನೆಯನ್ನು ಪರಿಪೂರ್ಣವಾಗಿ ನಿರ್ಮಿಸಲು ಒಂದೆರಡು ವರ್ಷಗಳಾದರೂ ಬೇಕು. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಮನೆ ಕಳೆದುಕೊಂಡವರಿಗೆ ಶೀಘ್ರವಾಗಿಯೇ ಪೂರ್ಣ ಪ್ರಮಾಣದ ಪರಿಹಾರಧನ ನೀಡಲು ಕ್ರಮವಹಿಸಬೇಕು.

-ಮಹೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

1 hour ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

1 hour ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

1 hour ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

1 hour ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

1 hour ago

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

2 hours ago