ರಾಜ್ಯದಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅನೇಕ ಕಡೆಗಳಲ್ಲಿ ಮನೆಗಳು ಕುಸಿದು ಬಿದ್ದು, ಆಸ್ತಿ-ಪಾಸ್ತಿ, ಜೀವ ಹಾನಿಗಳಾಗಿವೆ.
ಭಾರೀ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಅನೇಕ ಗ್ರಾಮಗಳು ಜಲಾವೃತಗೊಂಡಿವೆ.ಅಪಾರ ಪ್ರಮಾಣದ ಫಸಲು ನೀರುಪಾಲಾಗಿದ್ದು, ಮನೆಗಳು ಕುಸಿದು ಬಿದ್ದಿವೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಕಾರದಿಂದ ಬೆಳೆ ಹಾನಿ ಹಾಗೂ ಕುಸಿದುಬಿದ್ದ ಮನೆಗಳ ಮರುನಿರ್ಮಾಣಕ್ಕಾಗಿ ಪರಿಹಾರ ಧನವನ್ನು ಕೊಡಲಾಗುತ್ತಿದೆ. ಆದರೆ ಈ ಪರಿಹಾರದ ಮೊತ್ತ ಫಲಾನುಭವಿಗಳ ಕೈ ಸೇರುವಷ್ಟರಲ್ಲಿ ವರ್ಷವೇ ಆಗುತ್ತಿದ್ದು, ಅಲ್ಲಿಯವರೆಗೂ ಮುರಿದುಬಿದ್ದ ಮನೆಗಳಲ್ಲಿಯೇ ವಾಸಿಸಬೇಕಾಗಿದೆ. ಈ ಪರಿಹಾರದ ಮೊತ್ತವೂ ಹಂತ ಹಂತವಾಗಿ ಕಂತುಗಳ ರೂಪದಲ್ಲಿ ಫಲಾನುಭವಿಗಳ ಕೈ ಸೇರುವುದರಿಂದ ಮನೆಯನ್ನು ಪರಿಪೂರ್ಣವಾಗಿ ನಿರ್ಮಿಸಲು ಒಂದೆರಡು ವರ್ಷಗಳಾದರೂ ಬೇಕು. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಮನೆ ಕಳೆದುಕೊಂಡವರಿಗೆ ಶೀಘ್ರವಾಗಿಯೇ ಪೂರ್ಣ ಪ್ರಮಾಣದ ಪರಿಹಾರಧನ ನೀಡಲು ಕ್ರಮವಹಿಸಬೇಕು.
-ಮಹೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…