ರಾಜ್ಯದಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅನೇಕ ಕಡೆಗಳಲ್ಲಿ ಮನೆಗಳು ಕುಸಿದು ಬಿದ್ದು, ಆಸ್ತಿ-ಪಾಸ್ತಿ, ಜೀವ ಹಾನಿಗಳಾಗಿವೆ.
ಭಾರೀ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಅನೇಕ ಗ್ರಾಮಗಳು ಜಲಾವೃತಗೊಂಡಿವೆ.ಅಪಾರ ಪ್ರಮಾಣದ ಫಸಲು ನೀರುಪಾಲಾಗಿದ್ದು, ಮನೆಗಳು ಕುಸಿದು ಬಿದ್ದಿವೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಕಾರದಿಂದ ಬೆಳೆ ಹಾನಿ ಹಾಗೂ ಕುಸಿದುಬಿದ್ದ ಮನೆಗಳ ಮರುನಿರ್ಮಾಣಕ್ಕಾಗಿ ಪರಿಹಾರ ಧನವನ್ನು ಕೊಡಲಾಗುತ್ತಿದೆ. ಆದರೆ ಈ ಪರಿಹಾರದ ಮೊತ್ತ ಫಲಾನುಭವಿಗಳ ಕೈ ಸೇರುವಷ್ಟರಲ್ಲಿ ವರ್ಷವೇ ಆಗುತ್ತಿದ್ದು, ಅಲ್ಲಿಯವರೆಗೂ ಮುರಿದುಬಿದ್ದ ಮನೆಗಳಲ್ಲಿಯೇ ವಾಸಿಸಬೇಕಾಗಿದೆ. ಈ ಪರಿಹಾರದ ಮೊತ್ತವೂ ಹಂತ ಹಂತವಾಗಿ ಕಂತುಗಳ ರೂಪದಲ್ಲಿ ಫಲಾನುಭವಿಗಳ ಕೈ ಸೇರುವುದರಿಂದ ಮನೆಯನ್ನು ಪರಿಪೂರ್ಣವಾಗಿ ನಿರ್ಮಿಸಲು ಒಂದೆರಡು ವರ್ಷಗಳಾದರೂ ಬೇಕು. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಮನೆ ಕಳೆದುಕೊಂಡವರಿಗೆ ಶೀಘ್ರವಾಗಿಯೇ ಪೂರ್ಣ ಪ್ರಮಾಣದ ಪರಿಹಾರಧನ ನೀಡಲು ಕ್ರಮವಹಿಸಬೇಕು.
-ಮಹೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…